<p><strong>ಪುರುಲಿಯಾ (ಪಶ್ಚಿಮಬಂಗಾಳ):</strong> ‘ಬಿಜೆಪಿಯು ಮಾವೋವಾದಿಗಳಿಗಿಂತ ಅಪಾಯಕಾರಿ’ ಎಂದು ಟೀಕಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಚುನಾವಣೆಗೂ ಮುನ್ನ ಸುಳ್ಳು ಭರವಸೆಗಳನ್ನು ಬಿಜೆಪಿ ನೀಡುತ್ತದೆ’ ಎಂದು ಮಂಗಳವಾರ ಆರೋಪಿಸಿದರು.</p>.<p>‘ರಾಜಕೀಯ ಎನ್ನುವುದು ಹೊಣೆಗಾರಿಕೆಯಿಂದ ಕೂಡಿದ ಸಿದ್ಧಾಂತ. ಇದನ್ನು ದಿನವೂ ಬಟ್ಟೆ ಬದಲಾಯಿಸಿದಂತೆ ಬದಲಾಯಿಸಲು ಸಾಧ್ಯವಿಲ್ಲ. ಯಾರು ಬಿಜೆಪಿಯನ್ನು ಸೇರಲು ಬಯಸುತ್ತೀರೊ ಅವರು ತೆರಳಬಹುದು. ಆದರೆ ನಾವು ಆ ಪಕ್ಷದ ಮುಂದೆ ಎಂದಿಗೂ ತಲೆ ತಗ್ಗಿಸುವುದಿಲ್ಲ’ ಎಂದು ಪುರುಲಿಯಾದಲ್ಲಿ ನಡೆದ ರ್ಯಾಲಿ ವೇಳೆ ಮಮತಾ ಬ್ಯಾನರ್ಜಿ ಹೇಳಿದರು.</p>.<p>ರಾಜ್ಯದಲ್ಲಿ ಮುಂಬರುವ ಏಪ್ರಿಲ್–ಮೇನಲ್ಲಿ ವಿಧಾನಸಭೆ ಸಭೆ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಹಲವು ಟಿಎಂಸಿ ನಾಯಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆ ಆಗುತ್ತಿರುವುದರ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ಜಂಗಲ್ಮಹಲ್ ಪ್ರದೇಶದಲ್ಲಿ ವಾಸಿಸುತ್ತಿರುವ ಆದಿವಾಸಿ ಜನರನ್ನು ಬಿಜೆಪಿ ನಾಯಕರು ದಾರಿತಪ್ಪಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ಸುಳ್ಳು ಭರವಸೆಗಳನ್ನು ನೀಡಿದ್ದ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಕಡೆ ತಲೆ ಹಾಕಿಲ್ಲ’ ಎಂದರು. 2019ರ ಲೋಕಸಭೆ ಚುನಾವಣೆಯಲ್ಲಿ ಪುರುಲಿಯಾ ಸೇರಿದಂತೆ ಜಂಗಲ್ಮಹಲ್ ಪ್ರದೇಶದಲ್ಲಿನ ಎಲ್ಲ ಲೋಕಸಭೆ ಕ್ಷೇತ್ರಗಳನ್ನು ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/mamata-vijayan-may-retain-power-and-stalin-likely-to-dethrone-aiadmk-in-assembly-elections-says-797686.html" itemprop="url">ಬಿಜೆಪಿ ಮತ ಗಳಿಕೆ ಹೆಚ್ಚಳ: ಮಮತಾ, ಸ್ಟ್ಯಾಲಿನ್ ಅಧಿಕಾರಕ್ಕೆ: ಸಮೀಕ್ಷೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುರುಲಿಯಾ (ಪಶ್ಚಿಮಬಂಗಾಳ):</strong> ‘ಬಿಜೆಪಿಯು ಮಾವೋವಾದಿಗಳಿಗಿಂತ ಅಪಾಯಕಾರಿ’ ಎಂದು ಟೀಕಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಚುನಾವಣೆಗೂ ಮುನ್ನ ಸುಳ್ಳು ಭರವಸೆಗಳನ್ನು ಬಿಜೆಪಿ ನೀಡುತ್ತದೆ’ ಎಂದು ಮಂಗಳವಾರ ಆರೋಪಿಸಿದರು.</p>.<p>‘ರಾಜಕೀಯ ಎನ್ನುವುದು ಹೊಣೆಗಾರಿಕೆಯಿಂದ ಕೂಡಿದ ಸಿದ್ಧಾಂತ. ಇದನ್ನು ದಿನವೂ ಬಟ್ಟೆ ಬದಲಾಯಿಸಿದಂತೆ ಬದಲಾಯಿಸಲು ಸಾಧ್ಯವಿಲ್ಲ. ಯಾರು ಬಿಜೆಪಿಯನ್ನು ಸೇರಲು ಬಯಸುತ್ತೀರೊ ಅವರು ತೆರಳಬಹುದು. ಆದರೆ ನಾವು ಆ ಪಕ್ಷದ ಮುಂದೆ ಎಂದಿಗೂ ತಲೆ ತಗ್ಗಿಸುವುದಿಲ್ಲ’ ಎಂದು ಪುರುಲಿಯಾದಲ್ಲಿ ನಡೆದ ರ್ಯಾಲಿ ವೇಳೆ ಮಮತಾ ಬ್ಯಾನರ್ಜಿ ಹೇಳಿದರು.</p>.<p>ರಾಜ್ಯದಲ್ಲಿ ಮುಂಬರುವ ಏಪ್ರಿಲ್–ಮೇನಲ್ಲಿ ವಿಧಾನಸಭೆ ಸಭೆ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಹಲವು ಟಿಎಂಸಿ ನಾಯಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆ ಆಗುತ್ತಿರುವುದರ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ಜಂಗಲ್ಮಹಲ್ ಪ್ರದೇಶದಲ್ಲಿ ವಾಸಿಸುತ್ತಿರುವ ಆದಿವಾಸಿ ಜನರನ್ನು ಬಿಜೆಪಿ ನಾಯಕರು ದಾರಿತಪ್ಪಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ಸುಳ್ಳು ಭರವಸೆಗಳನ್ನು ನೀಡಿದ್ದ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಕಡೆ ತಲೆ ಹಾಕಿಲ್ಲ’ ಎಂದರು. 2019ರ ಲೋಕಸಭೆ ಚುನಾವಣೆಯಲ್ಲಿ ಪುರುಲಿಯಾ ಸೇರಿದಂತೆ ಜಂಗಲ್ಮಹಲ್ ಪ್ರದೇಶದಲ್ಲಿನ ಎಲ್ಲ ಲೋಕಸಭೆ ಕ್ಷೇತ್ರಗಳನ್ನು ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/mamata-vijayan-may-retain-power-and-stalin-likely-to-dethrone-aiadmk-in-assembly-elections-says-797686.html" itemprop="url">ಬಿಜೆಪಿ ಮತ ಗಳಿಕೆ ಹೆಚ್ಚಳ: ಮಮತಾ, ಸ್ಟ್ಯಾಲಿನ್ ಅಧಿಕಾರಕ್ಕೆ: ಸಮೀಕ್ಷೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>