<p><strong>ಶಿಮ್ಲಾ:</strong> ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (62) ಅವರ ಮೃತದೇಹವು ದೆಹಲಿಯಲ್ಲಿರುವ ಅವರ ಮನೆಯಲ್ಲಿ ಬುಧವಾರ ಪತ್ತೆಯಾಗಿದೆ.</p>.<p>ಶರ್ಮಾ ಅವರ ಮೃತದೇಹವು ಅವರದ್ಧೇ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಕೋಣೆಯನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು. ಘಟನಾ ಸ್ಥಳದಿಂದ ಯಾವುದೇ ಮರಣ ಪತ್ರ ಸಿಕ್ಕಿಲ್ಲ. ಇದು ಆತ್ಮಹತ್ಯೆ ಪ್ರಕರಣವೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಕಳೆದ ಹಲವು ತಿಂಗಳಿನಿಂದ ರಾಮ್ ಶರ್ಮಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.</p>.<p>‘ರಾಮ್ ಶರ್ಮಾ ಅವರು ತಮ್ಮ ಫೋನ್ ಕರೆಗೆ ಉತ್ತರಿಸುತ್ತಿರಲಿಲ್ಲ. ಈ ಬಗ್ಗೆ ಅವರ ಆಪ್ತ ಸಹಾಯಕ ನಮಗೆ ಈ ಬಗ್ಗೆ ಮಾಹಿತಿ ನೀಡಿದರು. ತಕ್ಷಣವೇ ಅವರ ಮನೆಗೆ ತೆರಳಿ ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಅವರ ದೇಹವು ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ’ ಅವರು ಮಾಹಿತಿ ನೀಡಿದರು.</p>.<p>ಮಂಡಿ ಜಿಲ್ಲೆಯ ಜಲ್ಪೆಹರ ಗ್ರಾಮದಲ್ಲಿ 1958ಜೂನ್ 10 ರಂದು ಜನಿಸಿದ್ದ ಇವರು, 2014 ಮತ್ತು 2019ರಲ್ಲಿ ಮಂಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.</p>.<p>ಇವರ ನಿಧನದ ಕಾರಣ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ಮುಂದಕ್ಕೆ ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (62) ಅವರ ಮೃತದೇಹವು ದೆಹಲಿಯಲ್ಲಿರುವ ಅವರ ಮನೆಯಲ್ಲಿ ಬುಧವಾರ ಪತ್ತೆಯಾಗಿದೆ.</p>.<p>ಶರ್ಮಾ ಅವರ ಮೃತದೇಹವು ಅವರದ್ಧೇ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಕೋಣೆಯನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು. ಘಟನಾ ಸ್ಥಳದಿಂದ ಯಾವುದೇ ಮರಣ ಪತ್ರ ಸಿಕ್ಕಿಲ್ಲ. ಇದು ಆತ್ಮಹತ್ಯೆ ಪ್ರಕರಣವೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಕಳೆದ ಹಲವು ತಿಂಗಳಿನಿಂದ ರಾಮ್ ಶರ್ಮಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.</p>.<p>‘ರಾಮ್ ಶರ್ಮಾ ಅವರು ತಮ್ಮ ಫೋನ್ ಕರೆಗೆ ಉತ್ತರಿಸುತ್ತಿರಲಿಲ್ಲ. ಈ ಬಗ್ಗೆ ಅವರ ಆಪ್ತ ಸಹಾಯಕ ನಮಗೆ ಈ ಬಗ್ಗೆ ಮಾಹಿತಿ ನೀಡಿದರು. ತಕ್ಷಣವೇ ಅವರ ಮನೆಗೆ ತೆರಳಿ ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಅವರ ದೇಹವು ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ’ ಅವರು ಮಾಹಿತಿ ನೀಡಿದರು.</p>.<p>ಮಂಡಿ ಜಿಲ್ಲೆಯ ಜಲ್ಪೆಹರ ಗ್ರಾಮದಲ್ಲಿ 1958ಜೂನ್ 10 ರಂದು ಜನಿಸಿದ್ದ ಇವರು, 2014 ಮತ್ತು 2019ರಲ್ಲಿ ಮಂಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.</p>.<p>ಇವರ ನಿಧನದ ಕಾರಣ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ಮುಂದಕ್ಕೆ ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>