<p><strong>ನವದೆಹಲಿ:</strong> ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಬಳಸಿದಂತೆ ಜಮ್ಮು–ಕಾಶ್ಮೀರದಲ್ಲಿ ವ್ಯಾಕ್ಯೂಮ್ ಕ್ಲೀನರ್ ಬಳಸಿ ಶುಚಿಗೊಳಿಸುತ್ತೇವೆ ಎಂದು ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಹೇಳಿದ್ದಾರೆ.</p>.<p>ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಜಮ್ಮು–ಕಾಶ್ಮೀರವನ್ನು ವ್ಯಾಕ್ಯೂಮ್ ಕ್ಲೀನರ್ ಬಳಸಿ ಶುಚಿಗೊಳಿಸುತ್ತೇವೆ. ಆ ಪ್ರದೇಶದಲ್ಲಿ ಶಾಂತಿಗೆ ಭಂಗ ತರುವವರನ್ನೆಲ್ಲ ತೊಡೆದುಹಾಕುತ್ತೇವೆ ಎಂದು ಹೇಳಿದ್ದಾರೆ.</p>.<p><a href="https://www.prajavani.net/india-news/bjp-workers-celebrate-by-crushing-bicycles-with-bulldozer-in-uttar-pradesh-918925.html" target="_blank">ಉತ್ತರ ಪ್ರದೇಶ: ಸೈಕಲ್ಗಳ ಮೇಲೆ ಬುಲ್ಡೋಜರ್ ಹರಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ</a></p>.<p>ಪ್ರತಿಪಕ್ಷಗಳು ಜಾತ್ಯತೀತತೆಯ ನೆಲೆಗಟ್ಟಿನಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿವೆ. ಆದರೆ ಅದನ್ನೀಗ ರಾಷ್ಟ್ರೀಯತೆಯ ವಿರುದ್ಧ ಎತ್ತಿಕಟ್ಟಲಾಗಿದೆ ಎಂದು ಅವರು ಟೀಕಿಸಿದ್ದಾರೆ.</p>.<p>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರಿನ ಜತೆ ‘ಬುಲ್ಡೋಜರ್’ ಎಂಬ ಪದ ಥಳಕು ಹಾಕಿಕೊಂಡಿತ್ತು. ಈ ಪದವನ್ನು ವಿರೋಧ ಪಕ್ಷಗಳು ಯೋಗಿ ಅವರನ್ನು ಟೀಕಿಸಲು ಬಳಸಿದ್ದರೆ ಬಿಜೆಪಿಯು ಸಮರ್ಥನೆಗೆ ಬಳಸಿಕೊಂಡಿತ್ತು.</p>.<p><strong>ಜಮ್ಮು–ಕಾಶ್ಮೀರ ಬಜೆಟ್ಗೆ ಮೆಚ್ಚುಗೆ:</strong> ಜಮ್ಮು–ಕಾಶ್ಮೀರ ಬಜೆಟ್ ಅಭಿವೃದ್ಧಿಯ ಆಶಯ ಹೊಂದಿದೆ ಎಂದು ಸುಧಾಂಶು ತ್ರಿವೇದಿ ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರದಲ್ಲಿ ಉಗ್ರ ಅಫ್ಜಲ್ ಗುರು ಹಾಗೂ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿರುವ ಉದಾಹರಣೆಗಳನ್ನು ಅವರು ರಾಜ್ಯಸಭೆಯಲ್ಲಿ ಉಲ್ಲೇಖಿಸಿದ್ದಾರೆ.</p>.<p><a href="https://www.prajavani.net/india-news/congress-calls-up-chief-minister-bulldozernath-says-he-crushed-girls-dreams-896617.html" target="_blank">ಬುಲ್ಡೋಜರ್ನಾಥ ವಿಧ್ವಂಸಕ ಸರ್ಕಾರ: ಯೋಗಿ ವಿರುದ್ಧ ಕಾಂಗ್ರೆಸ್ ಆಕ್ರೋಶ</a></p>.<p><strong>ಪಾಕ್ಗೆ ನಖ್ವಿ ಚಾಟಿ:</strong> ನೆರೆ ರಾಷ್ಟ್ರವು ಕಾಶ್ಮೀರದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸುತ್ತಿದೆ. ಮಾನವಹಕ್ಕುಗಳು ಕೇವಲ ಪ್ರತ್ಯೇಕತಾವಾದಿಗಳಿಗೆ, ಭಯೋತ್ಪಾದಕರಿಗೆ ಸಂಬಂಧಿಸಿದ್ದಲ್ಲ ಎಂದು ಮುಖ್ತಾರ್ ಅಬ್ಬಾಸ್ ನಖ್ವಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.</p>.<p><a href="https://www.prajavani.net/india-news/uttar-pradesh-assembly-election-2022-bjp-bulldozer-against-mafia-up-cm-yogi-adityanath-910228.html" target="_blank">ಮಾಫಿಯಾ ವಿರುದ್ಧ ಬಿಜೆಪಿ ಬುಲ್ಡೋಜರ್: ಯೋಗಿ ಆದಿತ್ಯನಾಥ</a></p>.<p><a href="https://www.prajavani.net/india-news/up-polls-yogi-adityanath-changed-names-of-everything-now-he-is-named-baba-bulldozer-says-akhilesh-912668.html" target="_blank">ಎಲ್ಲ ಹೆಸರುಗಳನ್ನು ಬದಲಿಸಿದ ಯೋಗಿ ಹೆಸರೀಗ ಬಾಬಾ ಬುಲ್ಡೋಜರ್ ಎಂದಾಗಿದೆ: ಅಖಿಲೇಶ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಬಳಸಿದಂತೆ ಜಮ್ಮು–ಕಾಶ್ಮೀರದಲ್ಲಿ ವ್ಯಾಕ್ಯೂಮ್ ಕ್ಲೀನರ್ ಬಳಸಿ ಶುಚಿಗೊಳಿಸುತ್ತೇವೆ ಎಂದು ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಹೇಳಿದ್ದಾರೆ.</p>.<p>ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಜಮ್ಮು–ಕಾಶ್ಮೀರವನ್ನು ವ್ಯಾಕ್ಯೂಮ್ ಕ್ಲೀನರ್ ಬಳಸಿ ಶುಚಿಗೊಳಿಸುತ್ತೇವೆ. ಆ ಪ್ರದೇಶದಲ್ಲಿ ಶಾಂತಿಗೆ ಭಂಗ ತರುವವರನ್ನೆಲ್ಲ ತೊಡೆದುಹಾಕುತ್ತೇವೆ ಎಂದು ಹೇಳಿದ್ದಾರೆ.</p>.<p><a href="https://www.prajavani.net/india-news/bjp-workers-celebrate-by-crushing-bicycles-with-bulldozer-in-uttar-pradesh-918925.html" target="_blank">ಉತ್ತರ ಪ್ರದೇಶ: ಸೈಕಲ್ಗಳ ಮೇಲೆ ಬುಲ್ಡೋಜರ್ ಹರಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ</a></p>.<p>ಪ್ರತಿಪಕ್ಷಗಳು ಜಾತ್ಯತೀತತೆಯ ನೆಲೆಗಟ್ಟಿನಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿವೆ. ಆದರೆ ಅದನ್ನೀಗ ರಾಷ್ಟ್ರೀಯತೆಯ ವಿರುದ್ಧ ಎತ್ತಿಕಟ್ಟಲಾಗಿದೆ ಎಂದು ಅವರು ಟೀಕಿಸಿದ್ದಾರೆ.</p>.<p>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರಿನ ಜತೆ ‘ಬುಲ್ಡೋಜರ್’ ಎಂಬ ಪದ ಥಳಕು ಹಾಕಿಕೊಂಡಿತ್ತು. ಈ ಪದವನ್ನು ವಿರೋಧ ಪಕ್ಷಗಳು ಯೋಗಿ ಅವರನ್ನು ಟೀಕಿಸಲು ಬಳಸಿದ್ದರೆ ಬಿಜೆಪಿಯು ಸಮರ್ಥನೆಗೆ ಬಳಸಿಕೊಂಡಿತ್ತು.</p>.<p><strong>ಜಮ್ಮು–ಕಾಶ್ಮೀರ ಬಜೆಟ್ಗೆ ಮೆಚ್ಚುಗೆ:</strong> ಜಮ್ಮು–ಕಾಶ್ಮೀರ ಬಜೆಟ್ ಅಭಿವೃದ್ಧಿಯ ಆಶಯ ಹೊಂದಿದೆ ಎಂದು ಸುಧಾಂಶು ತ್ರಿವೇದಿ ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರದಲ್ಲಿ ಉಗ್ರ ಅಫ್ಜಲ್ ಗುರು ಹಾಗೂ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿರುವ ಉದಾಹರಣೆಗಳನ್ನು ಅವರು ರಾಜ್ಯಸಭೆಯಲ್ಲಿ ಉಲ್ಲೇಖಿಸಿದ್ದಾರೆ.</p>.<p><a href="https://www.prajavani.net/india-news/congress-calls-up-chief-minister-bulldozernath-says-he-crushed-girls-dreams-896617.html" target="_blank">ಬುಲ್ಡೋಜರ್ನಾಥ ವಿಧ್ವಂಸಕ ಸರ್ಕಾರ: ಯೋಗಿ ವಿರುದ್ಧ ಕಾಂಗ್ರೆಸ್ ಆಕ್ರೋಶ</a></p>.<p><strong>ಪಾಕ್ಗೆ ನಖ್ವಿ ಚಾಟಿ:</strong> ನೆರೆ ರಾಷ್ಟ್ರವು ಕಾಶ್ಮೀರದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸುತ್ತಿದೆ. ಮಾನವಹಕ್ಕುಗಳು ಕೇವಲ ಪ್ರತ್ಯೇಕತಾವಾದಿಗಳಿಗೆ, ಭಯೋತ್ಪಾದಕರಿಗೆ ಸಂಬಂಧಿಸಿದ್ದಲ್ಲ ಎಂದು ಮುಖ್ತಾರ್ ಅಬ್ಬಾಸ್ ನಖ್ವಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.</p>.<p><a href="https://www.prajavani.net/india-news/uttar-pradesh-assembly-election-2022-bjp-bulldozer-against-mafia-up-cm-yogi-adityanath-910228.html" target="_blank">ಮಾಫಿಯಾ ವಿರುದ್ಧ ಬಿಜೆಪಿ ಬುಲ್ಡೋಜರ್: ಯೋಗಿ ಆದಿತ್ಯನಾಥ</a></p>.<p><a href="https://www.prajavani.net/india-news/up-polls-yogi-adityanath-changed-names-of-everything-now-he-is-named-baba-bulldozer-says-akhilesh-912668.html" target="_blank">ಎಲ್ಲ ಹೆಸರುಗಳನ್ನು ಬದಲಿಸಿದ ಯೋಗಿ ಹೆಸರೀಗ ಬಾಬಾ ಬುಲ್ಡೋಜರ್ ಎಂದಾಗಿದೆ: ಅಖಿಲೇಶ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>