ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ನಾವೆಲ್ಲರೂ ಒಟ್ಟಾಗಬೇಕು ಎಂದು ಬಿಜೆಪಿ ಸಂಸದ ಸೌಮಿತ್ರ ಖಾನ್ ಹೇಳಿದ್ದಾರೆ.
ಎಡಪಕ್ಷಗಳು ಮತ್ತು ಕಾಂಗ್ರೆಸ್ ಅನ್ನು ಉದ್ದೇಶಿಸಿ ಬಿಜೆಪಿ ಸಂಸದರು ಈ ಹೇಳಿಕೆ ನೀಡಿದ್ದು, ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ್ದಾರೆ.
ಆದರೆ ಖಾನ್ ಅವರ ಪ್ರಸ್ತಾವನೆಯನ್ನು ಕಾಂಗ್ರೆಸ್ ಮತ್ತು ಎಡಪಕ್ಷಗಳು ತಳ್ಳಿಹಾಕಿವೆ. ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಕಾಂಗ್ರೆಸ್ ಹೇಳಿದೆ.
ಯಾವುದೇ ಬೂತ್ ಮಟ್ಟದ ಚುನಾವಣೆಯಲ್ಲಿ ಟಿಎಂಸಿ ವಿರುದ್ಧ ಸ್ಪರ್ಧಿಸುವವರಿಗೆ ಬಿಜೆಪಿ ಸದಾ ಬೆಂಬಲ ನೀಡಲಿದೆ ಎಂದು ಸಂಸದ ಖಾನ್ ಹೇಳಿದ್ದಾರೆ.