<p><strong>ಮುಂಬೈ</strong>: ಕೇಂದ್ರ ಸಚಿವ ಸಂಪುಟದಲ್ಲಿ ಖಾಲಿ ಇದ್ದ ಸ್ಥಾನಗಳನ್ನು ಭರ್ತಿ ಮಾಡಲು ‘ಮಾನವ ಸಂಪನ್ಮೂಲ’ ಒದಗಿಸಿದ್ದಕ್ಕೆ ಬಿಜೆಪಿಯು ಶಿವಸೇನಾಗೆ ಕೃತಜ್ಞತೆಗಳನ್ನು ಸಲ್ಲಿಸಬೇಕು ಎಂದು ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ.</p>.<p>ಕೇಂದ್ರದಲ್ಲಿ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವರಾಗಿರುವ ಕಪೀಲ್ ಪಾಟೀಲ್ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವರಾಗಿರುವ ಭಾರತಿ ಪವಾರ್ ಅವರು ಎನ್ಸಿಪಿ ಜತೆಗಿದ್ದರು. ಎಂಎಸ್ಎಂಇ ಖಾತೆ ಹೊಂದಿರುವ ಸಚಿವ ನಾರಾಯಣ ರಾಣೆ ಅವರು ಈ ಮೊದಲು ಶಿವಸೇನಾ ಮತ್ತು ಕಾಂಗ್ರೆಸ್ ಜತೆಗಿದ್ದವರು. ಮಹಾರಾಷ್ಟ್ರದ ನಾಲ್ವರು ಸಚಿವರಲ್ಲಿ ಮೂವರು ಬಿಜೆಪಿ ಮೂಲದವರಲ್ಲ.</p>.<p>‘ಮಹಾರಾಷ್ಟ್ರದ ಎಲ್ಲ ನಾಲ್ವರು ಸಚಿವರಿಗೆ ಉತ್ತಮ ಖಾತೆಗಳನ್ನು ನೀಡಲಾಗಿದೆ. ಜನರ ಸೇವೆ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ’ ಎಂದು ಹೇಳಿದರು.</p>.<p>‘ಆದರೆ, ಖಾತೆಯನ್ನು ಹೋಲಿಸಿದಾಗ ನಾರಾಯಣ ರಾಣೆ ಅವರ ಸ್ಥಾನಮಾನ ದೊಡ್ಡದು. ಈ ಹಿಂದೆ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜತೆಗೆ, ಮಹತ್ವದ ಖಾತೆಗಳನ್ನು ಸಹ ನಿಭಾಯಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಕೇಂದ್ರ ಸಚಿವ ಸಂಪುಟದಲ್ಲಿ ಖಾಲಿ ಇದ್ದ ಸ್ಥಾನಗಳನ್ನು ಭರ್ತಿ ಮಾಡಲು ‘ಮಾನವ ಸಂಪನ್ಮೂಲ’ ಒದಗಿಸಿದ್ದಕ್ಕೆ ಬಿಜೆಪಿಯು ಶಿವಸೇನಾಗೆ ಕೃತಜ್ಞತೆಗಳನ್ನು ಸಲ್ಲಿಸಬೇಕು ಎಂದು ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ.</p>.<p>ಕೇಂದ್ರದಲ್ಲಿ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವರಾಗಿರುವ ಕಪೀಲ್ ಪಾಟೀಲ್ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವರಾಗಿರುವ ಭಾರತಿ ಪವಾರ್ ಅವರು ಎನ್ಸಿಪಿ ಜತೆಗಿದ್ದರು. ಎಂಎಸ್ಎಂಇ ಖಾತೆ ಹೊಂದಿರುವ ಸಚಿವ ನಾರಾಯಣ ರಾಣೆ ಅವರು ಈ ಮೊದಲು ಶಿವಸೇನಾ ಮತ್ತು ಕಾಂಗ್ರೆಸ್ ಜತೆಗಿದ್ದವರು. ಮಹಾರಾಷ್ಟ್ರದ ನಾಲ್ವರು ಸಚಿವರಲ್ಲಿ ಮೂವರು ಬಿಜೆಪಿ ಮೂಲದವರಲ್ಲ.</p>.<p>‘ಮಹಾರಾಷ್ಟ್ರದ ಎಲ್ಲ ನಾಲ್ವರು ಸಚಿವರಿಗೆ ಉತ್ತಮ ಖಾತೆಗಳನ್ನು ನೀಡಲಾಗಿದೆ. ಜನರ ಸೇವೆ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ’ ಎಂದು ಹೇಳಿದರು.</p>.<p>‘ಆದರೆ, ಖಾತೆಯನ್ನು ಹೋಲಿಸಿದಾಗ ನಾರಾಯಣ ರಾಣೆ ಅವರ ಸ್ಥಾನಮಾನ ದೊಡ್ಡದು. ಈ ಹಿಂದೆ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜತೆಗೆ, ಮಹತ್ವದ ಖಾತೆಗಳನ್ನು ಸಹ ನಿಭಾಯಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>