<p><strong>ಬೆಂಗಳೂರು</strong>: ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸೋಮವಾರ (ಜೂನ್ 21) ಹಮ್ಮಿಕೊಂಡಿರುವ ಲಸಿಕೆ ಮೇಳವನ್ನು ಯಶಸ್ವಿಗೊಳಿಸಬೇಕು. ಕೋವಿಡ್ನ್ನು ಸಮರ್ಪಕವಾಗಿ ನಿಭಾಯಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಲಹೆ ನೀಡಿದ್ದಾರೆ.</p>.<p>ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಜೆ.ಪಿನಡ್ಡಾ ಅವರು ಭಾನುವಾರ ನಡೆಸಿದ ವಿಡಿಯೊ ಸಂವಾದದಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದರು. ಸುಮಾರು ಒಂದು ಗಂಟೆ ಸಂವಾದ ನಡೆಯಿತು.</p>.<p>‘ಯೋಗ ದಿನಾಚರಣೆ ಪ್ರಯುಕ್ತ ಲಸಿಕೆ ಮೇಳ ನಡೆಸಬೇಕು. ಅದನ್ನು ಯಶಸ್ವಿಗೊಳಿಸಬೇಕು. ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜೊತೆಗೆ ಕೊರೊನಾ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು’ ಎಂದು ನಡ್ಡಾ ಸಲಹೆ ನೀಡಿದ್ದಾರೆ.</p>.<p>ಪಕ್ಷ ಸಂಘಟನೆಗೂ ಒತ್ತು: ಕೋವಿಡ್ ಸಂಕಷ್ಟ ಸಮಯದಲ್ಲಿ ಕಾರ್ಯಕರ್ತರು ಜನರ ಜತೆ ಇರಬೇಕು. ಬೂತ್ ಮಟ್ಟಕ್ಕೆ ಕಾರ್ಯಕ್ರಮಗಳು ತಲುಪಬೇಕು. ಲಸಿಕೆ ಎಲ್ಲರಿಗೂ ಸಿಗುವಂತೆ ಮಾಡಬೇಕು. ಪಕ್ಷ ಸಂಘಟನೆ ಚಟುವಟಿಕೆಯನ್ನೂ ಮರೆಯಬಾರದು’ ಎಂದೂ ನಡ್ಡಾ ಸಲಹೆ ನೀಡಿದ್ದಾರೆ.</p>.<p>‘ಮುಂದಿನ ಚುನಾವಣೆಗಳಲ್ಲಿ ಕೋವಿಡ್ ಪ್ರಮುಖ ಅಸ್ತ್ರವಾಗಲಿದೆ. ಅದರಲ್ಲಿ ಯಶಸ್ವಿಯಾದರೆ ಪಕ್ಷಕ್ಕೆ ಲಾಭ, ಸಂಘಟನೆಗೂ ಲಾಭ. ವಿಫಲವಾದರೆ ಪಕ್ಷದ ವಿರುದ್ಧ ವಿರೋಧ ಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಲಿದೆ. ಹೀಗಾಗಿ ಕೋವಿಡ್ ಯಶಸ್ವಿಯಾಗಿ ನಿರ್ವಹಿಸಿ, ಪಕ್ಷ ಸಂಘಟನೆ ಬಲಪಡಿಸಬೇಕು’ ಎಂದೂ ಸೂಚನೆ ನೀಡಿದ್ದಾರೆ.</p>.<p>‘ಕೋವಿಡ್ ನಿಯಮಗಳನ್ನು ಪಾಲಿಸಿ ಪ್ರತಿ ತಾಲ್ಲೂಕಿನಲ್ಲೂ ಯೋಗ ದಿನ ಆಚರಿಸಬೇಕು. ಕಲಾವಿದರು, ಪ್ರಮುಖ ವ್ಯಕ್ತಿಗಳು, ಕ್ರೀಡಾಪಟುಗಳು, ಸಾರ್ವಜನಿಕರು ಭಾಗವಹಿಸಲು ಆಹ್ವಾನ ನೀಡಬೇಕು. ಇದೇ 25ರಂದು ತುರ್ತುಪರಿಸ್ಥಿತಿಯ ನೆನಪಿಗಾಗಿ ಎಲ್ಲ ತಾಲ್ಲೂಕುಗಳಲ್ಲಿ ಕರಾಳ ದಿನಾಚರಣೆಗೆ ಪಕ್ಷ ನಿರ್ಧರಿಸಿದೆ. ಆ ದಿನ ವವಿಡಿಯೊ ಸಂವಾದ ಮೂಲಕ ತುರ್ತು ಪರಿಸ್ಥಿತಿ ವೇಳೆ ಜೈಲಿನಲ್ಲಿದ್ದವರನ್ನು ಗುರುತಿಸುವ ಕೆಲಸ ಮಾಡಬೇಕು’ ಎಂದೂ ಸಲಹೆ ನೀಡಿದರು.</p>.<p>‘ಇದೇ 23ರಂದು ಡಾ. ಶ್ಯಾಮ್ಪ್ರಸಾದ್ ಮುಖರ್ಜಿ ಪುಣ್ಯತಿಥಿ ಮತ್ತು ಜುಲೈ 6ರಂದು ಅವರ ಜನ್ಮದಿನ ಇದೆ. ಈ ಅವಧಿಯಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಶ್ಯಾಮ್ಪ್ರಸಾದ್ ಮುಖರ್ಜಿ ಅವರ ಚಿಂತನೆಗಳು, ಜೀವನ ಸ್ಫೂರ್ತಿ ಬಗ್ಗೆ ವಿಡಿಯೊ ಸಂವಾದ ಮೂಲಕ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಬೇಕು’ ಎಂದೂ ನಡ್ಡಾ ಸಲಹೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಚಾಲನೆ: ಸೋಮವಾರ ನಡೆಯಲಿರುವ ಲಸಿಕೆ ಮೇಳಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸೋಮವಾರ ಒಂದೇ ದಿನ 7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/hd-kumaraswamy-has-allegation-the-bjp-of-being-essentially-anti-kannada-840604.html" target="_blank"></a></strong><a href="https://www.prajavani.net/karnataka-news/hd-kumaraswamy-has-allegation-the-bjp-of-being-essentially-anti-kannada-840604.html" target="_blank">ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ: ಎಚ್.ಡಿ ಕುಮಾರಸ್ವಾಮಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸೋಮವಾರ (ಜೂನ್ 21) ಹಮ್ಮಿಕೊಂಡಿರುವ ಲಸಿಕೆ ಮೇಳವನ್ನು ಯಶಸ್ವಿಗೊಳಿಸಬೇಕು. ಕೋವಿಡ್ನ್ನು ಸಮರ್ಪಕವಾಗಿ ನಿಭಾಯಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಲಹೆ ನೀಡಿದ್ದಾರೆ.</p>.<p>ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಜೆ.ಪಿನಡ್ಡಾ ಅವರು ಭಾನುವಾರ ನಡೆಸಿದ ವಿಡಿಯೊ ಸಂವಾದದಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದರು. ಸುಮಾರು ಒಂದು ಗಂಟೆ ಸಂವಾದ ನಡೆಯಿತು.</p>.<p>‘ಯೋಗ ದಿನಾಚರಣೆ ಪ್ರಯುಕ್ತ ಲಸಿಕೆ ಮೇಳ ನಡೆಸಬೇಕು. ಅದನ್ನು ಯಶಸ್ವಿಗೊಳಿಸಬೇಕು. ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜೊತೆಗೆ ಕೊರೊನಾ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು’ ಎಂದು ನಡ್ಡಾ ಸಲಹೆ ನೀಡಿದ್ದಾರೆ.</p>.<p>ಪಕ್ಷ ಸಂಘಟನೆಗೂ ಒತ್ತು: ಕೋವಿಡ್ ಸಂಕಷ್ಟ ಸಮಯದಲ್ಲಿ ಕಾರ್ಯಕರ್ತರು ಜನರ ಜತೆ ಇರಬೇಕು. ಬೂತ್ ಮಟ್ಟಕ್ಕೆ ಕಾರ್ಯಕ್ರಮಗಳು ತಲುಪಬೇಕು. ಲಸಿಕೆ ಎಲ್ಲರಿಗೂ ಸಿಗುವಂತೆ ಮಾಡಬೇಕು. ಪಕ್ಷ ಸಂಘಟನೆ ಚಟುವಟಿಕೆಯನ್ನೂ ಮರೆಯಬಾರದು’ ಎಂದೂ ನಡ್ಡಾ ಸಲಹೆ ನೀಡಿದ್ದಾರೆ.</p>.<p>‘ಮುಂದಿನ ಚುನಾವಣೆಗಳಲ್ಲಿ ಕೋವಿಡ್ ಪ್ರಮುಖ ಅಸ್ತ್ರವಾಗಲಿದೆ. ಅದರಲ್ಲಿ ಯಶಸ್ವಿಯಾದರೆ ಪಕ್ಷಕ್ಕೆ ಲಾಭ, ಸಂಘಟನೆಗೂ ಲಾಭ. ವಿಫಲವಾದರೆ ಪಕ್ಷದ ವಿರುದ್ಧ ವಿರೋಧ ಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಲಿದೆ. ಹೀಗಾಗಿ ಕೋವಿಡ್ ಯಶಸ್ವಿಯಾಗಿ ನಿರ್ವಹಿಸಿ, ಪಕ್ಷ ಸಂಘಟನೆ ಬಲಪಡಿಸಬೇಕು’ ಎಂದೂ ಸೂಚನೆ ನೀಡಿದ್ದಾರೆ.</p>.<p>‘ಕೋವಿಡ್ ನಿಯಮಗಳನ್ನು ಪಾಲಿಸಿ ಪ್ರತಿ ತಾಲ್ಲೂಕಿನಲ್ಲೂ ಯೋಗ ದಿನ ಆಚರಿಸಬೇಕು. ಕಲಾವಿದರು, ಪ್ರಮುಖ ವ್ಯಕ್ತಿಗಳು, ಕ್ರೀಡಾಪಟುಗಳು, ಸಾರ್ವಜನಿಕರು ಭಾಗವಹಿಸಲು ಆಹ್ವಾನ ನೀಡಬೇಕು. ಇದೇ 25ರಂದು ತುರ್ತುಪರಿಸ್ಥಿತಿಯ ನೆನಪಿಗಾಗಿ ಎಲ್ಲ ತಾಲ್ಲೂಕುಗಳಲ್ಲಿ ಕರಾಳ ದಿನಾಚರಣೆಗೆ ಪಕ್ಷ ನಿರ್ಧರಿಸಿದೆ. ಆ ದಿನ ವವಿಡಿಯೊ ಸಂವಾದ ಮೂಲಕ ತುರ್ತು ಪರಿಸ್ಥಿತಿ ವೇಳೆ ಜೈಲಿನಲ್ಲಿದ್ದವರನ್ನು ಗುರುತಿಸುವ ಕೆಲಸ ಮಾಡಬೇಕು’ ಎಂದೂ ಸಲಹೆ ನೀಡಿದರು.</p>.<p>‘ಇದೇ 23ರಂದು ಡಾ. ಶ್ಯಾಮ್ಪ್ರಸಾದ್ ಮುಖರ್ಜಿ ಪುಣ್ಯತಿಥಿ ಮತ್ತು ಜುಲೈ 6ರಂದು ಅವರ ಜನ್ಮದಿನ ಇದೆ. ಈ ಅವಧಿಯಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಶ್ಯಾಮ್ಪ್ರಸಾದ್ ಮುಖರ್ಜಿ ಅವರ ಚಿಂತನೆಗಳು, ಜೀವನ ಸ್ಫೂರ್ತಿ ಬಗ್ಗೆ ವಿಡಿಯೊ ಸಂವಾದ ಮೂಲಕ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಬೇಕು’ ಎಂದೂ ನಡ್ಡಾ ಸಲಹೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಚಾಲನೆ: ಸೋಮವಾರ ನಡೆಯಲಿರುವ ಲಸಿಕೆ ಮೇಳಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸೋಮವಾರ ಒಂದೇ ದಿನ 7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/hd-kumaraswamy-has-allegation-the-bjp-of-being-essentially-anti-kannada-840604.html" target="_blank"></a></strong><a href="https://www.prajavani.net/karnataka-news/hd-kumaraswamy-has-allegation-the-bjp-of-being-essentially-anti-kannada-840604.html" target="_blank">ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ: ಎಚ್.ಡಿ ಕುಮಾರಸ್ವಾಮಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>