<p><strong>ನವದೆಹಲಿ: </strong>‘ಸಂಸತ್ ಕಲಾಪಗಳಲ್ಲಿ ಬಿಜೆಪಿ ಸಂಸದರು ತಪ್ಪದೇ ಪಾಲ್ಗೊಳ್ಳಬೇಕು. ಒಂದು ವೇಳೆ ಅವರು ತಮ್ಮಲ್ಲಿ ಪರಿವರ್ತನೆ ತಂದುಕೊಳ್ಳದಿದ್ದರೆ, ಕಾಲವೇ ಬದಲಾವಣೆ ತರುತ್ತದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು’ ಎಂದು ಮೂಲಗಳು ತಿಳಿಸಿವೆ.</p>.<p>ಇಲ್ಲಿನ ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಕೆಲ ಸಂಸದರು ಕಲಾಪಕ್ಕೆ ಗೈರು ಆಗುತ್ತಿರುವ ಕುರಿತು ಪ್ರಸ್ತಾಪಿಸಿದರು. ಇದೇ ಮೊದಲ ಬಾರಿಗೆ ಸಂಸತ್ ಭವನ ಬದಲಾಗಿ ಬೇರೆ ಸ್ಥಳದಲ್ಲಿ ಸಂಸದೀಯ ಪಕ್ಷದ ಸಭೆಯನ್ನು ಆಯೋಜಿಸಲಾಗಿದೆ.</p>.<p>‘ಯಾವುದೇ ಒಂದು ವಿಷಯ ಕುರಿತು ಮಕ್ಕಳಿಗೆ ಪದೇಪದೇ ಹೇಳಿದಾಗ ಅವರು ತಿದ್ದಿಕೊಳ್ಳುತ್ತಾರೆ. ವಿಷಯವನ್ನು ಪುನರಾವರ್ತನೆ ಮಾಡುವುದೂ ಇಲ್ಲ ಎಂಬುದಾಗಿ ಅವರು ಸಂಸದರಿಗೆ ಕಿವಿಮಾತು ಹೇಳಿದರು’ ಎಂದು ಇವೇ ಮೂಲಗಳು ತಿಳಿಸಿವೆ.</p>.<p>ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ‘ಎಲ್ಲ ಸಂಸದರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವಂತೆ ಪ್ರಧಾನಿ ಸೂಚಿಸಿದರು’ ಎಂದು ಹೇಳಿದರು.</p>.<p>ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ ಘಟಕ ಹಾಗೂ ಮಂಡಲಗಳ ಅಧ್ಯಕ್ಷರನ್ನು ಚಹಾಕೂಟಕ್ಕೆ ಆಹ್ವಾನಿಸಿ. ಅವರೊಂದಿಗೆ ಸಂವಾದ ನಡೆಸಿ ಎಂಬುದಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಂಸದರಿಗೆ ಸೂಚಿಸಿದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಸಂಸತ್ ಕಲಾಪಗಳಲ್ಲಿ ಬಿಜೆಪಿ ಸಂಸದರು ತಪ್ಪದೇ ಪಾಲ್ಗೊಳ್ಳಬೇಕು. ಒಂದು ವೇಳೆ ಅವರು ತಮ್ಮಲ್ಲಿ ಪರಿವರ್ತನೆ ತಂದುಕೊಳ್ಳದಿದ್ದರೆ, ಕಾಲವೇ ಬದಲಾವಣೆ ತರುತ್ತದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು’ ಎಂದು ಮೂಲಗಳು ತಿಳಿಸಿವೆ.</p>.<p>ಇಲ್ಲಿನ ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಕೆಲ ಸಂಸದರು ಕಲಾಪಕ್ಕೆ ಗೈರು ಆಗುತ್ತಿರುವ ಕುರಿತು ಪ್ರಸ್ತಾಪಿಸಿದರು. ಇದೇ ಮೊದಲ ಬಾರಿಗೆ ಸಂಸತ್ ಭವನ ಬದಲಾಗಿ ಬೇರೆ ಸ್ಥಳದಲ್ಲಿ ಸಂಸದೀಯ ಪಕ್ಷದ ಸಭೆಯನ್ನು ಆಯೋಜಿಸಲಾಗಿದೆ.</p>.<p>‘ಯಾವುದೇ ಒಂದು ವಿಷಯ ಕುರಿತು ಮಕ್ಕಳಿಗೆ ಪದೇಪದೇ ಹೇಳಿದಾಗ ಅವರು ತಿದ್ದಿಕೊಳ್ಳುತ್ತಾರೆ. ವಿಷಯವನ್ನು ಪುನರಾವರ್ತನೆ ಮಾಡುವುದೂ ಇಲ್ಲ ಎಂಬುದಾಗಿ ಅವರು ಸಂಸದರಿಗೆ ಕಿವಿಮಾತು ಹೇಳಿದರು’ ಎಂದು ಇವೇ ಮೂಲಗಳು ತಿಳಿಸಿವೆ.</p>.<p>ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ‘ಎಲ್ಲ ಸಂಸದರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವಂತೆ ಪ್ರಧಾನಿ ಸೂಚಿಸಿದರು’ ಎಂದು ಹೇಳಿದರು.</p>.<p>ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ ಘಟಕ ಹಾಗೂ ಮಂಡಲಗಳ ಅಧ್ಯಕ್ಷರನ್ನು ಚಹಾಕೂಟಕ್ಕೆ ಆಹ್ವಾನಿಸಿ. ಅವರೊಂದಿಗೆ ಸಂವಾದ ನಡೆಸಿ ಎಂಬುದಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಂಸದರಿಗೆ ಸೂಚಿಸಿದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>