<p><strong>ನವದೆಹಲಿ:</strong> 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಆದಿವಾಸಿ, ಬುಡಕಟ್ಟು ಸಮುದಾಯಗಳ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಜುಲೈ 18ರ ರಾಷ್ಟ್ರಪತಿ ಚುನಾವಣೆಯ ಫಲಿತಾಂಶದ ನಂತರ, ದ್ರೌಪದಿ ಮುರ್ಮು ಅವರ ಗೆಲುವನ್ನು ದೇಶದಾದ್ಯಂತ ಅದ್ಧೂರಿಯಾಗಿ ಆಚರಿಸಲು ಯೋಜನೆ ರೂಪಿಸಿದೆ.</p>.<p>ಕೆಲವು ವಿರೋಧ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಮುರ್ಮು ಅವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದು, ಅವರ ಗೆಲವು ಬಹುತೇಕ ನಿಶ್ಚಿತವಾಗಿದೆ. ಹೀಗಾಗಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಆರಂಭಿಸಲಾಗಿದೆ. ಈ ಸಂಬಂಧ ನಿರ್ದೇಶನಗಳು ಸಿಕ್ಕಿವೆ ಎಂದು ಪಕ್ಷದ ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.</p>.<p>‘ಪಕ್ಷ ಮತ್ತು ದೇಶದ ಪ್ರತಿಯೊಬ್ಬರೂ ಮುರ್ಮು ಅವರ ಗೆಲುವಿನ ಬಗ್ಗೆ ವಿಶ್ವಾಸ ಹೊಂದಿದ್ದಾರೆ. ಅವರು ಗೆದ್ದರೆ, ಮೊದಲ ಬುಡಕಟ್ಟು ಮಹಿಳೆ ಅಧ್ಯಕ್ಷರಾದಂತಾಗಲಿದೆ. ದೇಶದಾದ್ಯಂತ, ಅದರಲ್ಲೂ ವಿಶೇಷವಾಗಿ ಬುಡಕಟ್ಟು ಪ್ರಾಬಲ್ಯವಿರುವ ಹಳ್ಳಿಗಳು ಮತ್ತು ಪ್ರದೇಶಗಳಲ್ಲಿ ಸಂಭ್ರಮಾಚರಣೆ ಆಯೋಜಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<p>ಯೋಜನೆಯಂತೆ ದೇಶದ ಒಂದು ಲಕ್ಷಕ್ಕೂ ಅಧಿಕ ಆದಿವಾಸಿ ಗ್ರಾಮಗಳಲ್ಲಿ ವಿಜಯೋತ್ಸವ ಆಚರಿಸಲಾಗುತ್ತದೆ ಎಂದು ತಿಳಿದು ಬಂದಿದೆ.</p>.<p>‘ಜುಲೈ 21 ರಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶದ ಅಧಿಕೃತ ಘೋಷಣೆಯ ನಂತರ ವಿಜಯೋತ್ಸವದ ಆಚರಣೆಗಳು ಪ್ರಾರಂಭವಾಗುತ್ತವೆ. ಬುಡಕಟ್ಟು ಪ್ರದೇಶಗಳು, ಮಂಡಲ (ಬ್ಲಾಕ್) ಮಟ್ಟದಲ್ಲಿ ಆಚರಣೆ ನಡೆಸಲಾಗುವುದು ಮತ್ತು ಮುರ್ಮು ಪೋಸ್ಟರ್ಗಳನ್ನು ಮಾತ್ರ ಬಳಸಲಾಗುವುದು’ ಎಂದು ಪಕ್ಷದೊಳಗಿನ ಹಲವರು ತಿಳಿಸಿದ್ದಾರೆ.</p>.<p>ಅಧ್ಯಕ್ಷೀಯ ಚುನಾವಣೆಯ ನಂತರ ಬುಡಕಟ್ಟು ಸಮುದಾಯದ ಪ್ರಾಬಲ್ಯವಿರುವ ಎಲ್ಲಾ ಗ್ರಾಮಗಳು ಮತ್ತು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಣ್ಣ ಮಟ್ಟದ ರ್ಯಾಲಿಗಳನ್ನೂ ಆಯೋಜಿಸಲಾಗುತ್ತಿದೆ ಎಂದು ಗೊತ್ತಾಗಿದೆ.</p>.<p>ಈ ತಿಂಗಳ ಆರಂಭದಲ್ಲಿ ಹೈದರಾಬಾದ್ನಲ್ಲಿ ನಡೆದ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಎನ್ಡಿಎ ಅಭ್ಯರ್ಥಿ ಮುರ್ಮು ಅವರನ್ನು ಶ್ಲಾಘಿಸಿದ್ದರು ಮತ್ತು ಅವರ ಉಮೇದುವಾರಿಕೆಯು ರಾಜಕೀಯವನ್ನು ಮೀರಿದ್ದಾಗಿದೆ ಎಂದು ಹೇಳಿದ್ದರು.</p>.<p>ಈ ವರ್ಷ ನಡೆಯಲಿರುವ ಗುಜರಾತ್ನ ವಿಧಾನಸಭಾ ಚುನಾವಣೆ, ಮುಂದಿನ ವರ್ಷ ನಡೆಯಲಿರುವ ಚತ್ತೀಸಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆ, ನಂತರದ ಲೋಕಸಭೆ ಚುನಾವಣೆಯಲ್ಲಿ ಬುಡಕಟ್ಟು ಸಮುದಾಯಗಳನ್ನು ಮುರ್ಮು ಅವರ ಗೆಲುವಿನ ಮೂಲಕ ಪಕ್ಷದತ್ತ ಸೆಳೆಯಲು ಬಿಜೆಪಿ ಚಿಂತಿಸಿದೆ.</p>.<p>ಎನ್ಡಿಎಯಿಂದ ದ್ರೌಪದಿ ಮುರ್ಮು ಅಭ್ಯರ್ಥಿಯಾಗಿದ್ದರೆ, ಎನ್ಡಿಎಯೇತರ ಪಕ್ಷಗಳು ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯನ್ನಾಗಿಸಿವೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, 21ರಂದು ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಆದಿವಾಸಿ, ಬುಡಕಟ್ಟು ಸಮುದಾಯಗಳ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಜುಲೈ 18ರ ರಾಷ್ಟ್ರಪತಿ ಚುನಾವಣೆಯ ಫಲಿತಾಂಶದ ನಂತರ, ದ್ರೌಪದಿ ಮುರ್ಮು ಅವರ ಗೆಲುವನ್ನು ದೇಶದಾದ್ಯಂತ ಅದ್ಧೂರಿಯಾಗಿ ಆಚರಿಸಲು ಯೋಜನೆ ರೂಪಿಸಿದೆ.</p>.<p>ಕೆಲವು ವಿರೋಧ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಮುರ್ಮು ಅವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದು, ಅವರ ಗೆಲವು ಬಹುತೇಕ ನಿಶ್ಚಿತವಾಗಿದೆ. ಹೀಗಾಗಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಆರಂಭಿಸಲಾಗಿದೆ. ಈ ಸಂಬಂಧ ನಿರ್ದೇಶನಗಳು ಸಿಕ್ಕಿವೆ ಎಂದು ಪಕ್ಷದ ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.</p>.<p>‘ಪಕ್ಷ ಮತ್ತು ದೇಶದ ಪ್ರತಿಯೊಬ್ಬರೂ ಮುರ್ಮು ಅವರ ಗೆಲುವಿನ ಬಗ್ಗೆ ವಿಶ್ವಾಸ ಹೊಂದಿದ್ದಾರೆ. ಅವರು ಗೆದ್ದರೆ, ಮೊದಲ ಬುಡಕಟ್ಟು ಮಹಿಳೆ ಅಧ್ಯಕ್ಷರಾದಂತಾಗಲಿದೆ. ದೇಶದಾದ್ಯಂತ, ಅದರಲ್ಲೂ ವಿಶೇಷವಾಗಿ ಬುಡಕಟ್ಟು ಪ್ರಾಬಲ್ಯವಿರುವ ಹಳ್ಳಿಗಳು ಮತ್ತು ಪ್ರದೇಶಗಳಲ್ಲಿ ಸಂಭ್ರಮಾಚರಣೆ ಆಯೋಜಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<p>ಯೋಜನೆಯಂತೆ ದೇಶದ ಒಂದು ಲಕ್ಷಕ್ಕೂ ಅಧಿಕ ಆದಿವಾಸಿ ಗ್ರಾಮಗಳಲ್ಲಿ ವಿಜಯೋತ್ಸವ ಆಚರಿಸಲಾಗುತ್ತದೆ ಎಂದು ತಿಳಿದು ಬಂದಿದೆ.</p>.<p>‘ಜುಲೈ 21 ರಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶದ ಅಧಿಕೃತ ಘೋಷಣೆಯ ನಂತರ ವಿಜಯೋತ್ಸವದ ಆಚರಣೆಗಳು ಪ್ರಾರಂಭವಾಗುತ್ತವೆ. ಬುಡಕಟ್ಟು ಪ್ರದೇಶಗಳು, ಮಂಡಲ (ಬ್ಲಾಕ್) ಮಟ್ಟದಲ್ಲಿ ಆಚರಣೆ ನಡೆಸಲಾಗುವುದು ಮತ್ತು ಮುರ್ಮು ಪೋಸ್ಟರ್ಗಳನ್ನು ಮಾತ್ರ ಬಳಸಲಾಗುವುದು’ ಎಂದು ಪಕ್ಷದೊಳಗಿನ ಹಲವರು ತಿಳಿಸಿದ್ದಾರೆ.</p>.<p>ಅಧ್ಯಕ್ಷೀಯ ಚುನಾವಣೆಯ ನಂತರ ಬುಡಕಟ್ಟು ಸಮುದಾಯದ ಪ್ರಾಬಲ್ಯವಿರುವ ಎಲ್ಲಾ ಗ್ರಾಮಗಳು ಮತ್ತು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಣ್ಣ ಮಟ್ಟದ ರ್ಯಾಲಿಗಳನ್ನೂ ಆಯೋಜಿಸಲಾಗುತ್ತಿದೆ ಎಂದು ಗೊತ್ತಾಗಿದೆ.</p>.<p>ಈ ತಿಂಗಳ ಆರಂಭದಲ್ಲಿ ಹೈದರಾಬಾದ್ನಲ್ಲಿ ನಡೆದ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಎನ್ಡಿಎ ಅಭ್ಯರ್ಥಿ ಮುರ್ಮು ಅವರನ್ನು ಶ್ಲಾಘಿಸಿದ್ದರು ಮತ್ತು ಅವರ ಉಮೇದುವಾರಿಕೆಯು ರಾಜಕೀಯವನ್ನು ಮೀರಿದ್ದಾಗಿದೆ ಎಂದು ಹೇಳಿದ್ದರು.</p>.<p>ಈ ವರ್ಷ ನಡೆಯಲಿರುವ ಗುಜರಾತ್ನ ವಿಧಾನಸಭಾ ಚುನಾವಣೆ, ಮುಂದಿನ ವರ್ಷ ನಡೆಯಲಿರುವ ಚತ್ತೀಸಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆ, ನಂತರದ ಲೋಕಸಭೆ ಚುನಾವಣೆಯಲ್ಲಿ ಬುಡಕಟ್ಟು ಸಮುದಾಯಗಳನ್ನು ಮುರ್ಮು ಅವರ ಗೆಲುವಿನ ಮೂಲಕ ಪಕ್ಷದತ್ತ ಸೆಳೆಯಲು ಬಿಜೆಪಿ ಚಿಂತಿಸಿದೆ.</p>.<p>ಎನ್ಡಿಎಯಿಂದ ದ್ರೌಪದಿ ಮುರ್ಮು ಅಭ್ಯರ್ಥಿಯಾಗಿದ್ದರೆ, ಎನ್ಡಿಎಯೇತರ ಪಕ್ಷಗಳು ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯನ್ನಾಗಿಸಿವೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, 21ರಂದು ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>