ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿಯು ಅದೇ ಪಕ್ಷದ ಮಹಿಳೆಯೊಬ್ಬರನ್ನು ಹತ್ಯೆ ಮಾಡುವ ಮತ್ತೊಂದು ಸಂಚು ರೂಪಿಸಿದೆ. ಬಳಿಕ ಕೊಲೆ ಆರೋಪವನ್ನು ಬಂಗಾಳದ ಜನರ ಮೇಲೆ ಹೊರಿಸಲು ಮುಂದಾಗಿದೆ. ಉತ್ತರಪ್ರದೇಶ ಮತ್ತು ಬಿಹಾರದಿಂದ ಕರೆಸಿಕೊಂಡಿರುವ ಗೂಂಡಾಗಳ ಮೂಲಕ ಬಿಜೆಪಿಯು ಹತ್ಯೆಗೆ ಸಂಚು ರೂಪಿಸಿದೆ ಎಂದು ಹೇಳಿದ್ದಾರೆ.