ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ ಬಿಸಿ

Last Updated 30 ಜುಲೈ 2022, 15:41 IST
ಅಕ್ಷರ ಗಾತ್ರ

ಪಟ್ನಾ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಾವು ಓದಿದ್ದ ಕಾಲೇಜಿನಲ್ಲೇ ವಿದ್ಯಾರ್ಥಿಗಳ ಪ್ರತಿಭಟನೆ ಎದುರಿಸುವಂತಾಗಿದೆ.

ಪಕ್ಷದ ಏಳು ಘಟಕಗಳ ಎರಡು ದಿನಗಳ ಸಮಾವೇಶ ಉದ್ಘಾಟಿಸುವ ಸಲುವಾಗಿ ಶನಿವಾರ ಪಟ್ನಾಗೆ ಬಂದ ಅವರು, ಮಾರ್ಗ ಮಧ್ಯೆ ತಾವು ಓದಿದ್ದ ಕಾಲೇಜಿಗೆ ಭೇಟಿ ನೀಡಿದರು. ಇದೇ ವೇಳೆ ಎಐಎಸ್‌ಎ ಸದಸ್ಯರು ‘ಜೆ.ಪಿ. ನಡ್ಡಾ ಗೋ ಬ್ಯಾಕ್’ ಘೋಷಣೆಗಳನ್ನು ಕೂಗಿದರು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ವಾಪಸ್ ಪಡೆಯಬೇಕು ಹಾಗೂ ಪಟ್ನಾ ವಿಶ್ವವಿದ್ಯಾಲಯಕ್ಕೆ ಕೇಂದ್ರೀಯ ವಿವಿ ಮಾನ್ಯತೆ ಕೊಡಬೇಕು ಎಂಬ ಫಲಕಗಳನ್ನು ಪ್ರದರ್ಶಿಸಿದರು.

ಬಳಿಕ ಪೊಲೀಸ್ ಸಿಬ್ಬಂದಿ ನೆರವಿನಿಂದ ನಡ್ಡಾ ಅವರು ಸುರಕ್ಷಿತವಾಗಿ ಕಾಲೇಜು ಪ್ರವೇಶಿಸಿದರು. ಈ ಘಟನೆಗೆ ಸಂಬಂಧಿಸಿ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿಯ ವಿವಿಧ ಘಟಕಗಳ ಸಮಾವೇಶ ಭಾನುವಾರ ಸಮಾರೋಪಗೊಳ್ಳಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT