ಮದುರೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಘೋಷಣೆಯಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಈ ಘೋಷಣೆ ಮಾಡಿದ್ದಾರೆ.
ತಮಿಳುನಾಡು ವಿಧಾನಸಭೆ ಕ್ಷೇತ್ರಗಳಿಗೆ 2021ರ ಏಪ್ರಿಲ್–ಮೇನಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಚುನಾವಣೆ ಎದುರಿಸಲಿವೆ.
ಜೆ.ಪಿ.ನಡ್ಡಾ ಅವರು ಮದುರೈನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮೈತ್ರಿ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಎರಡು ದಿನಗಳ ತಮಿಳುನಾಡು ಪ್ರವಾಸದಲ್ಲಿರುವ ಅವರು ಪುದುಚೇರಿಗೂ ಭೇಟಿ ನೀಡಲಿದ್ದಾರೆ.
ಇ.ಮಧುಸುಧನ್ ಎಐಎಡಿಎಂಕೆ ಪಕ್ಷದ ಅಧ್ಯಕ್ಷರಾಗಿದ್ದು, ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಹಾಗೂ ಒ ಪನ್ನೀರ್ ಸೆಲ್ವಂ ಪಕ್ಷದ ಪ್ರಮುಖ ನಾಯಕರು.
#WATCH | "I would like to share with you and declare here that the BJP has decided that in the coming times, BJP along with AIADMK & other like-minded parties will contest the elections," says JP Nadda, BJP National president at a rally in Madurai, Tamil Nadu pic.twitter.com/zA0I3BzUNt