ಎರಡು ದಿನಗಳ ಭೇಟಿ ಸಲುವಾಗಿ ಉತ್ತರಾಖಂಡಕ್ಕೆ ಆಗಮಿಸಿರುವ ನಡ್ಡಾ, ರಾಯ್ವಾಲಾದಲ್ಲಿ ನಡೆದ ʼಸೈನಿಕ ಸಮ್ಮಾನ್ ಕಾರ್ಯಕ್ರಮದಲ್ಲಿ, ಭಾರತೀಯ ಸೇನೆಯ ಯೋಧರನ್ನುದ್ದೇಶಿಸಿ ಮಾತನಾಡಿದರು. 2014ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಗಡಿಯಲ್ಲಿ ಶತ್ರು ರಾಷ್ಟ್ರಗಳು ಯಾವುದೇ ದುಸ್ಸಾಹಸಕ್ಕೆ ಮುಂದಾದರೆ ನೇರವಾಗಿ ಸಮರ್ಥ ಪ್ರತಿಕ್ರಿಯೆ ನೀಡಲು ಸಶಸ್ತ್ರ ಪಡೆಗೆ ನಿರ್ದೇಶಿಸಲಾಗಿದೆ ಎಂದರು.