ಆದರೆ, ಕೆಲವೇ ಗಂಟೆಗಳಲ್ಲಿ ವಿ.ಮುರಳೀಧರನ್ ಅವರು ಸ್ಪಷ್ಟೀಕರಣ ನೀಡಿದರು. ‘ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆಯಷ್ಟೆ. ಅದನ್ನು ನಾನು ತಪ್ಪಾಗಿ ಅರ್ಥೈಸಿಕೊಂಡು, ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದ್ದೇನೆ. ಶ್ರೀಧರನ್ ಅವರನ್ನು ಕೇರಳ ಚುನಾವಣೆಗೆ ಎನ್ಡಿಎಯ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಲ್ಲ’ ಎಂದು ಮುರಳೀಧರನ್ ಅವರು ಸ್ಪಷ್ಟನೆ ನೀಡಿದರು. ಇದನ್ನು ಹಲವು ಕೇರಳಿಗರು ಟ್ವಿಟರ್ನಲ್ಲಿ ಲೇವಡಿ ಮಾಡಿದ್ದಾರೆ.