<p><strong>ನವದೆಹಲಿ:</strong> ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡಿರುವ ಬಿಜೆಪಿ ರಾಜ್ಯಗಳ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ಬದಲಾವಣೆ ನೇಮಕ ಮಾಡಿ ಆದೇಶ ಹೊರಡಿಸಿದೆ</p>.<p>ಪಕ್ಷದ ಸಂಘಟನಾ ಮುಖ್ಯಸ್ಥರ ಹುದ್ದೆಗಳನ್ನು ಇತ್ತೀಚೆಗಷ್ಟೇ ಬದಲಿಸಿದ್ದ ಬಿಜೆಪಿ ಇದೀಗ ರಾಜ್ಯಗಳ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ಬದಲಾವಣೆ</p>.<p>ಪಕ್ಷದ ಹಿರಿಯ ಮುಖಂಡ ಅರುಣ ಸಿಂಗ್ ಅವರಿಗೆ ಕರ್ನಾಟಕದ ಜವಾಬ್ದಾರಿ ವಹಿಸಲಾಗಿದ್ದು, ಡಿ.ಕೆ. ಅರುಣಾ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.</p>.<p>ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗಷ್ಟೇ ನೇಮಕಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಕ್ಷದ ರಾಜ್ಯ ಮುಖಂಡ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿ ವಹಿಸಲಾಗಿದೆ.</p>.<p>ರಾಜ್ಯದ ಇನ್ನೊಬ್ಬ ಮುಖಂಡ ನಿರ್ಮಲಕುಮಾರ್ ಸುರಾನಾ ಅವರನ್ನು ನೆರೆಯ ಪುದುಚೇರಿಗೆ ನಿಯೋಜಿಸಲಾಗಿದೆ. ಇದುವರೆಗೆ ರಾಜ್ಯದ ಉಸ್ತುವಾರಿಯಾಗಿದ್ದ ಪಿ.ಮುರುಳೀಧರ ರಾವ್ ಅವರಿಗೆ ಮಧ್ಯಪ್ರದೇಶದ ಹೊಣೆ ವಹಿಸಲಾಗಿದೆ.</p>.<p>ಬಿಜೆಪಿ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರನ್ನು ಪಶ್ಚಿಮ ಬಂಗಾಳದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇವರು ಕೈಲಾಶ್ ವಿಜಯವರ್ಗೀಯ ಅವರಿಗೆ ನೆರವಾಗಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಈ ಬದಲಾವಣೆ ಮಾಡಲಾಗಿದೆ.</p>.<p>ಸಂಬಿತ್ ಪಾತ್ರಾ ಅವರಿಗೆ ಮಣಿಪುರದ ಉಸ್ತುವಾರಿ ನೀಡಲಾಗಿದೆ. ಬೈಜಯಂತ್ ಪಾಂಡಾ ಅವರಿಗೆ ಅಸ್ಸಾಂ ಉಸ್ತುವಾರಿ ನೀಡಲಾಗಿದೆ.</p>.<p>ಸತ್ಯಕುಮಾರ್, ಸುನೀಲ್ ಓಜಾ, ಸಂಜೀವ್ ಚೌರಾಸಿಯಾ ಅವರನ್ನು ಉತ್ತರಪ್ರದೇಶದ ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.</p>.<p>ಡಿ.ಪುರಂದರೇಶ್ವರಿ ಅವರು ಒಡಿಶಾ ಹಾಗೂ ಛತ್ತೀಸ್ಗಢದ ಉಸ್ತುವಾರಿಯನ್ನು ನೋಡಿಕೊಳ್ಳಲ್ಲಿದ್ದಾರೆ.</p>.<p>ಬಿಜೆಪಿ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಅವರಿಗೆ ಪಂಜಾಬ್, ಚಂಡೀಗಢದ ಹೋನೆ ನೀಡಲಾಗಿದೆ. ದಿಲೀಪ್ ಸಾಕಿಯಾ ಅವರು ಜಾರ್ಖಂಡ್ ಮತ್ತು ಅರುಣಾಚಲ ಪ್ರದೇಶದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡಿರುವ ಬಿಜೆಪಿ ರಾಜ್ಯಗಳ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ಬದಲಾವಣೆ ನೇಮಕ ಮಾಡಿ ಆದೇಶ ಹೊರಡಿಸಿದೆ</p>.<p>ಪಕ್ಷದ ಸಂಘಟನಾ ಮುಖ್ಯಸ್ಥರ ಹುದ್ದೆಗಳನ್ನು ಇತ್ತೀಚೆಗಷ್ಟೇ ಬದಲಿಸಿದ್ದ ಬಿಜೆಪಿ ಇದೀಗ ರಾಜ್ಯಗಳ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ಬದಲಾವಣೆ</p>.<p>ಪಕ್ಷದ ಹಿರಿಯ ಮುಖಂಡ ಅರುಣ ಸಿಂಗ್ ಅವರಿಗೆ ಕರ್ನಾಟಕದ ಜವಾಬ್ದಾರಿ ವಹಿಸಲಾಗಿದ್ದು, ಡಿ.ಕೆ. ಅರುಣಾ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.</p>.<p>ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗಷ್ಟೇ ನೇಮಕಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಕ್ಷದ ರಾಜ್ಯ ಮುಖಂಡ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿ ವಹಿಸಲಾಗಿದೆ.</p>.<p>ರಾಜ್ಯದ ಇನ್ನೊಬ್ಬ ಮುಖಂಡ ನಿರ್ಮಲಕುಮಾರ್ ಸುರಾನಾ ಅವರನ್ನು ನೆರೆಯ ಪುದುಚೇರಿಗೆ ನಿಯೋಜಿಸಲಾಗಿದೆ. ಇದುವರೆಗೆ ರಾಜ್ಯದ ಉಸ್ತುವಾರಿಯಾಗಿದ್ದ ಪಿ.ಮುರುಳೀಧರ ರಾವ್ ಅವರಿಗೆ ಮಧ್ಯಪ್ರದೇಶದ ಹೊಣೆ ವಹಿಸಲಾಗಿದೆ.</p>.<p>ಬಿಜೆಪಿ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರನ್ನು ಪಶ್ಚಿಮ ಬಂಗಾಳದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇವರು ಕೈಲಾಶ್ ವಿಜಯವರ್ಗೀಯ ಅವರಿಗೆ ನೆರವಾಗಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಈ ಬದಲಾವಣೆ ಮಾಡಲಾಗಿದೆ.</p>.<p>ಸಂಬಿತ್ ಪಾತ್ರಾ ಅವರಿಗೆ ಮಣಿಪುರದ ಉಸ್ತುವಾರಿ ನೀಡಲಾಗಿದೆ. ಬೈಜಯಂತ್ ಪಾಂಡಾ ಅವರಿಗೆ ಅಸ್ಸಾಂ ಉಸ್ತುವಾರಿ ನೀಡಲಾಗಿದೆ.</p>.<p>ಸತ್ಯಕುಮಾರ್, ಸುನೀಲ್ ಓಜಾ, ಸಂಜೀವ್ ಚೌರಾಸಿಯಾ ಅವರನ್ನು ಉತ್ತರಪ್ರದೇಶದ ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.</p>.<p>ಡಿ.ಪುರಂದರೇಶ್ವರಿ ಅವರು ಒಡಿಶಾ ಹಾಗೂ ಛತ್ತೀಸ್ಗಢದ ಉಸ್ತುವಾರಿಯನ್ನು ನೋಡಿಕೊಳ್ಳಲ್ಲಿದ್ದಾರೆ.</p>.<p>ಬಿಜೆಪಿ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಅವರಿಗೆ ಪಂಜಾಬ್, ಚಂಡೀಗಢದ ಹೋನೆ ನೀಡಲಾಗಿದೆ. ದಿಲೀಪ್ ಸಾಕಿಯಾ ಅವರು ಜಾರ್ಖಂಡ್ ಮತ್ತು ಅರುಣಾಚಲ ಪ್ರದೇಶದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>