<p><strong>ಲಖನೌ</strong>: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಯು ತನ್ನ ಸಂಕುಚಿತ ಕೋಮು ಕಾರ್ಯಸೂಚಿಯೊಂದಿಗೆ ಮರಳಿದೆ ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಗುರುವಾರ ಆರೋಪಿಸಿದ್ದಾರೆ.</p>.<p>‘ಚುನಾವಣೆಗೂ ಮುನ್ನ ಬಿಜೆಪಿ ಮತ್ತೆ ತನ್ನ ಸಂಕುಚಿತ ರಾಜಕೀಯ ಆರಂಭಿಸಿದೆ. ಆದರೆ, ಅವರ ಅಭಿವೃದ್ಧಿ ಯೋಜನೆಗಳು ಪೊಳ್ಳು ಎಂದು ಈಗಾಗಲೇ ಸಾಬೀತಾಗಿದೆ’ ಎಂದು ಎಂದು ಅವರು ಟ್ವೀಟ್ನಲ್ಲಿ ಟೀಕಿಸಿದ್ದಾರೆ.</p>.<p>‘ಪಕ್ಷವು ಈಗ ಧಾರ್ಮಿಕ ಭಾವನೆಗಳು, ಹಿಂದೂ–ಮುಸ್ಲಿಂ ವಿಭಜನೆ ಮೊದಲಾದ ವಿಚಾರಗಳಲ್ಲಿ ರಾಜಕೀಯ ಮಾಡಲು ಆರಂಭಿಸಿದೆ. ಆದರೆ, ಜನರು ಮತ್ತೊಮ್ಮೆ ಮೋಸ ಹೋಗುವುದಿಲ್ಲ. ’ ಎಂದು ಅವರು ಹೇಳಿದರು.</p>.<p>‘ರಾಜ್ಯದ ಜನರ ತಲಾ ಆದಾಯ ಕುಂಠಿತವಾಗಿರುವುದು ಮತ್ತು ಇನ್ನೂ ಬಡವರು ಹಾಗೂ ಹಿಂದುಳಿದವರಾಗಿ ಉಳಿದಿರುವುದನ್ನು ಇತ್ತೀಚಿನ ರಿಸರ್ವ್ ಬ್ಯಾಂಕಿನ ಅಂಕಿ ಅಂಶಗಳು ತೋರಿಸುತ್ತಿವೆ. ಇವು ಬಿಜೆಪಿಯ ಅಭಿವೃದ್ಧಿ ಯೋಜನೆಗಳು ಕೇವಲ ಬಿಸಿ ಗಾಳಿಯಂತೆ ಎಂಬುದನ್ನು ಸಾಬೀತುಪಡಿಸುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಯು ತನ್ನ ಸಂಕುಚಿತ ಕೋಮು ಕಾರ್ಯಸೂಚಿಯೊಂದಿಗೆ ಮರಳಿದೆ ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಗುರುವಾರ ಆರೋಪಿಸಿದ್ದಾರೆ.</p>.<p>‘ಚುನಾವಣೆಗೂ ಮುನ್ನ ಬಿಜೆಪಿ ಮತ್ತೆ ತನ್ನ ಸಂಕುಚಿತ ರಾಜಕೀಯ ಆರಂಭಿಸಿದೆ. ಆದರೆ, ಅವರ ಅಭಿವೃದ್ಧಿ ಯೋಜನೆಗಳು ಪೊಳ್ಳು ಎಂದು ಈಗಾಗಲೇ ಸಾಬೀತಾಗಿದೆ’ ಎಂದು ಎಂದು ಅವರು ಟ್ವೀಟ್ನಲ್ಲಿ ಟೀಕಿಸಿದ್ದಾರೆ.</p>.<p>‘ಪಕ್ಷವು ಈಗ ಧಾರ್ಮಿಕ ಭಾವನೆಗಳು, ಹಿಂದೂ–ಮುಸ್ಲಿಂ ವಿಭಜನೆ ಮೊದಲಾದ ವಿಚಾರಗಳಲ್ಲಿ ರಾಜಕೀಯ ಮಾಡಲು ಆರಂಭಿಸಿದೆ. ಆದರೆ, ಜನರು ಮತ್ತೊಮ್ಮೆ ಮೋಸ ಹೋಗುವುದಿಲ್ಲ. ’ ಎಂದು ಅವರು ಹೇಳಿದರು.</p>.<p>‘ರಾಜ್ಯದ ಜನರ ತಲಾ ಆದಾಯ ಕುಂಠಿತವಾಗಿರುವುದು ಮತ್ತು ಇನ್ನೂ ಬಡವರು ಹಾಗೂ ಹಿಂದುಳಿದವರಾಗಿ ಉಳಿದಿರುವುದನ್ನು ಇತ್ತೀಚಿನ ರಿಸರ್ವ್ ಬ್ಯಾಂಕಿನ ಅಂಕಿ ಅಂಶಗಳು ತೋರಿಸುತ್ತಿವೆ. ಇವು ಬಿಜೆಪಿಯ ಅಭಿವೃದ್ಧಿ ಯೋಜನೆಗಳು ಕೇವಲ ಬಿಸಿ ಗಾಳಿಯಂತೆ ಎಂಬುದನ್ನು ಸಾಬೀತುಪಡಿಸುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>