‘ಒಬ್ಬ ಸಹೋದರನನ್ನು ಮತ್ತೊಬ್ಬನ ಮೇಲೆ ಎತ್ತಿಕಟ್ಟುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ದೇಶದಲ್ಲಿದ್ದ ಸಾಮಾಜಿಕ ಸೌಹಾರ್ದತೆ, ಭ್ರಾತೃತ್ವ, ಒಕ್ಕೂಟ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳು ಮಾಡುತ್ತಿರುವವರು ಮತ್ತು ಹಾಳು ಮಾಡಲು ಸಂಚು ರೂಪಿಸುತ್ತಿರುವವರು ನಿಜ ಅರ್ಥದಲ್ಲಿ ತುಕ್ಡೇ ಗುಂಪು ಆಗಿದ್ದಾರೆ’ ಎಂದು ಮಧ್ಯಪ್ರದೇಶದ ಭಾರತ ಜೋಡಿಸಿ ಯಾತ್ರೆಯ ಮಾಧ್ಯಮ ಉಸ್ತುವಾರಿಯೂ ಆಗಿರುವ ರಾಗಿಣಿ ಹೇಳಿದರು.