ಇದೇವೇಳೆ ಅವರು, 'ಎಂಸಿಡಿಯಲ್ಲಿಯೂ ಅರವಿಂದ ಕೇಜ್ರಿವಾಲ್ ಸರ್ಕಾರವೇ ಅಧಿಕಾರಕ್ಕೇರಲಿದ್ದು, ಕೌನ್ಸಿಲರ್ಗಳು ಸಾರ್ವಜನಿಕ ಹಿತಾಸಕ್ತಿಯಿಂದ ಕೆಲಸ ಮಾಡಲಿದ್ದಾರೆ. ವಾರ್ಡ್ಗಳಲ್ಲಿ ಕೇಜ್ರಿವಾಲ್ ಅವರ ಕೌನ್ಸಿಲರ್ಗಳು ಇದ್ದರೆ, ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಒತ್ತು ನೀಡಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ, ಅಭಿವೃದ್ಧಿ ಕಾರ್ಯಗಳಿಗೆ ಕಡಿವಾಣ ಹಾಕಲಿದ್ದಾರೆ. ಕೇಜ್ರಿವಾಲ್ ವಿರುದ್ಧ ಹೋರಾಡುವುದೊಂದೇ ಅವರ ಅಜೆಂಡಾ ಆಗಿರಲಿದೆ' ಎಂದು ಒತ್ತಿ ಹೇಳಿದ್ದಾರೆ.