<p><strong>ನವದೆಹಲಿ:</strong> ನೋಟು ರದ್ದತಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಳೆದುಹೋದ ದಶಕದಲ್ಲಿ ನಡೆಸಿದ ಭ್ರಷ್ಟಾಚಾರ ಮತ್ತು ಕಪ್ಪು ಹಣದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>ದೇಶದಲ್ಲಿ ನೋಟು ರದ್ದತಿಯಾಗಿ ಇಂದಿಗೆ ನಾಲ್ಕು ವರ್ಷ. ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆ ನೋಟುಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದರು.</p>.<p>ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಚಂದ್ರಶೇಖರ್, ‘ರಾಕ್ಷಸೀಕರಣ ದೇಶಕ್ಕೆ ಒಳ್ಳೆಯದು’ ಎಂದು ಹೇಳಿದರು.</p>.<p>‘ನೋಟು ರದ್ದತಿಯಿಂದ ಆರ್ಥಿಕತೆಯನ್ನು ಸ್ವಚ್ಛಗೊಳಿಸಲಾಗಿದೆ. ಅನೌಪಚಾರಿಕ ಆರ್ಥಿಕ ವಲಯ ಒಟ್ಟುಗೂಡಿಸುವ ಮೂಲಕ ಔಪಚಾರಿಕ ಆರ್ಥಿಕತೆಯನ್ನು ಉತ್ತೇಜಿಸಿದೆ. ಮತ್ತು ಸಮಾಜದ ಎಲ್ಲಾ ವರ್ಗದವರಿಗೆ ಅಭೂತಪೂರ್ವ ಆರ್ಥಿಕ ಉತ್ತೇಜನಗಳನ್ನು ನೀಡಿದೆ. ಜೊತೆಗೆ, ಆದಾಯ ಗಳಿಕೆಗೆ ಅನುಕೂಲವಾಗಿದೆ’ ಎಂದು ಚಂದ್ರಶೇಖರ್ ಹೇಳಿದರು.</p>.<p>ರಾಹುಲ್ ಗಾಂಧಿ ಹೆಸರು ಹೇಳದೆ ವಾಗ್ದಾಳಿ ನಡೆಸಿದ ಚಂದ್ರಶೇಖರ್, ‘2004ರಿಂದ 2009 ಮತ್ತು 2009 ರಿಂದ 2014ರ ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅತಿ ಹೆಚ್ಚು ಭ್ರಷ್ಟಾಚಾರ ಮತ್ತು ಕಪ್ಪು ಹಣ ಸಂಗ್ರಹಿಸಿತ್ತು’ ಎಂದು ಆರೋಪಿಸಿದರು.</p>.<p>2014ರ ನಂತರ ಮೋದಿ ಸರ್ಕಾರ ಆರ್ಥಿಕತೆಯನ್ನು ಪರಿವರ್ತಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸಿತು. ಇದರಿಂದ ಭ್ರಷ್ಟಾಚಾರ ಮತ್ತು ಸೋರಿಕೆಯಿಲ್ಲದೆ ಸರ್ಕಾರಿ ಸಂಪನ್ಮೂಲಗಳು ಬಡವರಿಗೆ ಮತ್ತು ದೀನ ದಲಿತರಿಗೆ ತಲುಪಿಸುವುದು ಸಾಧ್ಯವಾಯಿತು ಎಂದು ಹೇಳಿದರು.</p>.<p>ಕಳೆದ ಆರು ವರ್ಷಗಳಲ್ಲಿ ಮೋದಿ ಸರ್ಕಾರ ಕೈಗೊಂಡ ಆರ್ಥಿಕ ನಿರ್ಧಾರಗಳು ಭಾರತದ ಆರ್ಥಿಕತೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿವೆ ಎಂದು ಚಂದ್ರಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೋಟು ರದ್ದತಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಳೆದುಹೋದ ದಶಕದಲ್ಲಿ ನಡೆಸಿದ ಭ್ರಷ್ಟಾಚಾರ ಮತ್ತು ಕಪ್ಪು ಹಣದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>ದೇಶದಲ್ಲಿ ನೋಟು ರದ್ದತಿಯಾಗಿ ಇಂದಿಗೆ ನಾಲ್ಕು ವರ್ಷ. ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆ ನೋಟುಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದರು.</p>.<p>ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಚಂದ್ರಶೇಖರ್, ‘ರಾಕ್ಷಸೀಕರಣ ದೇಶಕ್ಕೆ ಒಳ್ಳೆಯದು’ ಎಂದು ಹೇಳಿದರು.</p>.<p>‘ನೋಟು ರದ್ದತಿಯಿಂದ ಆರ್ಥಿಕತೆಯನ್ನು ಸ್ವಚ್ಛಗೊಳಿಸಲಾಗಿದೆ. ಅನೌಪಚಾರಿಕ ಆರ್ಥಿಕ ವಲಯ ಒಟ್ಟುಗೂಡಿಸುವ ಮೂಲಕ ಔಪಚಾರಿಕ ಆರ್ಥಿಕತೆಯನ್ನು ಉತ್ತೇಜಿಸಿದೆ. ಮತ್ತು ಸಮಾಜದ ಎಲ್ಲಾ ವರ್ಗದವರಿಗೆ ಅಭೂತಪೂರ್ವ ಆರ್ಥಿಕ ಉತ್ತೇಜನಗಳನ್ನು ನೀಡಿದೆ. ಜೊತೆಗೆ, ಆದಾಯ ಗಳಿಕೆಗೆ ಅನುಕೂಲವಾಗಿದೆ’ ಎಂದು ಚಂದ್ರಶೇಖರ್ ಹೇಳಿದರು.</p>.<p>ರಾಹುಲ್ ಗಾಂಧಿ ಹೆಸರು ಹೇಳದೆ ವಾಗ್ದಾಳಿ ನಡೆಸಿದ ಚಂದ್ರಶೇಖರ್, ‘2004ರಿಂದ 2009 ಮತ್ತು 2009 ರಿಂದ 2014ರ ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅತಿ ಹೆಚ್ಚು ಭ್ರಷ್ಟಾಚಾರ ಮತ್ತು ಕಪ್ಪು ಹಣ ಸಂಗ್ರಹಿಸಿತ್ತು’ ಎಂದು ಆರೋಪಿಸಿದರು.</p>.<p>2014ರ ನಂತರ ಮೋದಿ ಸರ್ಕಾರ ಆರ್ಥಿಕತೆಯನ್ನು ಪರಿವರ್ತಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸಿತು. ಇದರಿಂದ ಭ್ರಷ್ಟಾಚಾರ ಮತ್ತು ಸೋರಿಕೆಯಿಲ್ಲದೆ ಸರ್ಕಾರಿ ಸಂಪನ್ಮೂಲಗಳು ಬಡವರಿಗೆ ಮತ್ತು ದೀನ ದಲಿತರಿಗೆ ತಲುಪಿಸುವುದು ಸಾಧ್ಯವಾಯಿತು ಎಂದು ಹೇಳಿದರು.</p>.<p>ಕಳೆದ ಆರು ವರ್ಷಗಳಲ್ಲಿ ಮೋದಿ ಸರ್ಕಾರ ಕೈಗೊಂಡ ಆರ್ಥಿಕ ನಿರ್ಧಾರಗಳು ಭಾರತದ ಆರ್ಥಿಕತೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿವೆ ಎಂದು ಚಂದ್ರಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>