ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಯುವತಿಯು ದಲಿತ ಕುಟುಂಬಕ್ಕೆ ಸೇರಿದವಳು. ಪೊಲೀಸರು ಆತುರದಿಂದ ಆಕೆಯ ಕೊನೆಯ ವಿಧಿಗಳನ್ನು ನಡೆಸಿದ್ದಾರೆ. ಈಗ ಆಕೆಯ ಕುಟುಂಬದ ಮೇಲೆ ನಿರ್ಬಂಧ ಹೇರಲಾಗಿದೆ. ತನಿಖೆ ನಡೆಯುತ್ತಿರುವ ಸಮಯದಲ್ಲಿ ಸಂತ್ರಸ್ತೆಯ ಕುಟುಂಬದ ಮೇಲೆ ನಿರ್ಬಂಧ ಹೇರುವ ಯಾವುದೇ ನಿಯಮದ ಬಗ್ಗೆ ನನಗೆ ತಿಳಿದಿಲ್ಲ. ಇದರಿಂದ ಎಸ್ಐಟಿ ತನಿಖೆಯ ಬಗ್ಗೆಯೇ ಪ್ರಶ್ನೆಗಳು ಏಳುತ್ತವೆ' ಎಂದು ಉಮಾ ಭಾರತಿ ಹೇಳಿದ್ದಾರೆ.