ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಿಂದ ಬಿಜೆಪಿಯಲ್ಲಿ ನಡುಕ ಸೃಷ್ಟಿ: ಗೆಹಲೋತ್

Last Updated 14 ನವೆಂಬರ್ 2022, 12:56 IST
ಅಕ್ಷರ ಗಾತ್ರ

ಜೈಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯು ಬಿಜೆಪಿಯಲ್ಲಿ ನಡುಕ ಸೃಷ್ಟಿಸಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸೋಮವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿರುವ ಅವರು, ರಾಷ್ಟ್ರೀಯತೆಯ ಹೆಸರಲ್ಲಿ ಬಿಜೆಪಿ ದೇಶದ ಜನರನ್ನು ಹಾದಿ ತಪ್ಪಿಸಿದೆ. ಅದನ್ನೀಗ ಜನರು ಅರ್ಥಮಾಡಿಕೊಂಡಿದ್ದಾರೆ. ಈ ಹಿಂದೆ ಗುಜರಾತ್, ಹಿಮಾಚಲ ಪ್ರದೇಶದಲ್ಲಿ ನೀವದನ್ನು ಗಮನಿಸಿರಬಹುದು ಎಂದು ಹೇಳಿದರು.

ನಾವು ದೇಶಪ್ರೇಮಿಗಳಲ್ಲ. ಅವರು ಮಾತ್ರ ದೇಶಪ್ರೇಮಿಗಳು ಎಂದು ಬಿಜೆಪಿಯವರು ಅಂದುಕೊಂಡಿದ್ದಾರೆ. ಆದರೆ ಈಗ ಬಿಜೆಪಿ ಬಣ್ಣ ಬಯಲಾಗಿದೆ. ರಾಷ್ಟ್ರೀಯತೆಯ ಹೆಸರಿನ ಮೋಸವನ್ನು ಜನರು ಕ್ರಮೇಣ ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ಬಿಜೆಪಿಯಲ್ಲಿ ನಡುಕ ಸೃಷ್ಟಿಸಿದೆ. ಇದರಿಂದ ಬಿಜೆಪಿ ಭೀತಿಗೊಳಗಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT