ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಂಕ್ರಾಮಿಕ ರೋಗದ ಹೆಸರಲ್ಲಿ ಸರ್ಕಾರವನ್ನು ಮೂಲೆಗುಂಪು ಮಾಡುವುದು ಸರಿಯಲ್ಲ. ಇಂಥ ತಂತ್ರಗಳನ್ನು ಬೇರೆ ಕಡೆ ಬಳಸಿಕೊಳ್ಳಿ. ಇಂಥ ತಂತ್ರಗಳು, ಪ್ರಸ್ತುತ ಎದುರಿಸುತ್ತಿರುವ ಕೋವಿಡ್ ಲಸಿಕೆಯ ಕೊರತೆಯನ್ನಾಗಲಿ, ನಿರುದ್ಯೋಗ ಸಮಸ್ಯೆ ಮತ್ತು ಆರ್ಥಿಕ ಸಂಕಷ್ಟವನ್ನು ಪರಿಹರಿಸುವುದಿಲ್ಲ‘ ಎಂದು ಹೇಳಿದ್ದಾರೆ.