ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ತಮಿಳುನಾಡಿನಲ್ಲಿ ಬಿಹಾರಿ ವಲಸಿಗರ ಮೇಲೆ ಹಲ್ಲೆ' ಎಂಬುದು ಬಿಜೆಪಿ ವದಂತಿ: ಜೆಡಿಯು

Last Updated 9 ಮಾರ್ಚ್ 2023, 19:30 IST
ಅಕ್ಷರ ಗಾತ್ರ

ಪಟ್ನಾ: ಚುನಾವಣಾ ಲಾಭಕ್ಕಾಗಿ ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ದಾಳಿ ನಡೆಯುತ್ತಿದೆ ಎಂಬ ವದಂತಿಗಳನ್ನು ಬಿಜೆಪಿ ಹರಡುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಆರೋಪಿಸಿದ್ದಾರೆ

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಮಾತನಾಡಿ, ‘ತಮಿಳುನಾಡಿನಲ್ಲಿ ಏನೂ ಆಗಿಲ್ಲ ಎಂದು ತಿಳಿದು ಬಂದಿದೆ. ವದಂತಿಗಳನ್ನು ಹರಡಿದ್ದಕ್ಕಾಗಿ ಪ್ರಕರಣ ದಾಖಲಿಸಿರುವ ಮತ್ತು ಬಂಧಿಸಲಾದ ಜನರನ್ನು ನೋಡಿ’ ಎಂದು ದಕ್ಷಿಣ ರಾಜ್ಯದಲ್ಲಿ ಡಿಎಂಕೆ ಸರ್ಕಾರ ಹಲವಾರು ಬಿಜೆಪಿ ನಾಯಕರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಉಲ್ಲೇಖಿಸಿದರು.

ಚುನಾವಣಾ ಲಾಭಕ್ಕಾಗಿ ವದಂತಿಗಳನ್ನು ಹರಡಲಾಗುತ್ತಿದೆ. ಆದರೆ, ಅದು ತಪ್ಪು. ದೇಶದ ಜನರು ಈಗ ಏನು ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳುವಷ್ಟು ಜಾಗೃತರಾಗಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT