ಇಂತಹ ಬೆಳವಣಿಗೆ ಸ್ವಾತಂತ್ರ್ಯ ಭಾರತದ ಪರಿಸ್ಥಿತಿಯನ್ನು ಯಾವ ಹಂತದಲ್ಲಿ ಬೇಕಿದ್ದರೂ ಹದಗೆಡಿಸಬಹುದು. ಜ್ಞಾನವಾಪಿ, ಮಥುರ, ತಾಜ್ ಮಹಲ್ ಮತ್ತಿತರ ಸ್ಥಳಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ ಪಿತೂರಿ ನಡೆಯುತ್ತಿದೆ. ಇಂತಹ ಪ್ರಯತ್ನಗಳಿಂದ ದೇಶ ದುರ್ಬಲಗೊಳ್ಳಲಿದೆ. ಈ ವಿಚಾರವನ್ನು ಗಂಭೀರವಾಗಿ ಬಿಜೆಪಿ ಪರಿಗಣಿಸಬೇಕು' ಎಂದು ಮಾಯಾವತಿ ಆಗ್ರಹಿಸಿದ್ದಾರೆ.