ನವದೆಹಲಿ: ಉತ್ತರಪ್ರದೇಶದಲ್ಲಿ ಖಾಲಿ ಇರುವ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪಚುನಾವಣೆಯಲ್ಲಿಜೈ ಪ್ರಕಾಶ್ ನಿಶಾದ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಜ್ಜಾಗಿದೆ.ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ನಿಶಾದ್ ಅವರ ಹೆಸರನ್ನು ಮಂಗಳವಾರ ಅಂತಿಮಗೊಳಿಸಿದೆ.
ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಕ್ಷದರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪ್ರಕಟಣೆಯ ಮೂಲಕ ಹಂಚಿಕೊಂಡಿದ್ದಾರೆ.
ರಾಜ್ಯಸಭಾ ಸದಸ್ಯ ಬೇನಿ ಪ್ರಸಾದ್ ವರ್ಮಾ ಅವರ ನಿಧನದಿಂದಾಗಿ ಖಾಲಿಯಾಗಿರುವ ರಾಜ್ಯಸಭಾ ಸ್ಥಾನಕ್ಕೆ ಇದೇ ತಿಂಗಳ (ಆಗಸ್ಟ್) 24 ರಂದು ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.