‘ಪ್ರಚಾರ ಅಭಿಯಾನಕ್ಕೆ ಸಂಬಂಧಿಸಿ ಎರಡು ದಿನಗಳ ಸಭೆಯಲ್ಲಿ ಮುಖ್ಯವಾಗಿ ಚರ್ಚಿಸಲಾಗಿದೆ. ಉಳಿದಂತೆ ಶೋಷಿತರನ್ನು, ಬುಡಕಟ್ಟು ಸಮುದಾಯದವರನ್ನು, ದಲಿತರನ್ನು ಗೌರವಿಸುವ ಬಗ್ಗೆಯೂ ಚರ್ಚಿಸಿದ್ದೇವೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ಸಲುವಾಗಿ ಬಿಜೆಪಿ ಕಾರ್ಯಕರ್ತರ ಪ್ರತಿ ಮನೆಗಳಲ್ಲಿಯೂ ತ್ರಿವರ್ಣಧ್ವಜ ಆರೋಹಣ ಮಾಡಲು ನಿರ್ಧರಿಸಿದ್ದೇವೆ’ ಎಂದು ಅರುಣ್ ಸಿಂಗ್ ಹೇಳಿದ್ದಾರೆ.