<p><strong>ಪಣಜಿ: </strong>ಗೋವಾದಲ್ಲಿ ಬಿಜೆಪಿಯು ಶಾಸಕರನ್ನು ಕುರಿ ಮತ್ತು ಮೇಕೆಗಳಂತೆ ಖರೀದಿ ಮಾಡಿತ್ತು ಎಂದು ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಆರೋಪಿಸಿದ್ದಾರೆ. ಒಬ್ಬೊಬ್ಬ ಶಾಸಕನನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ₹30 ಕೋಟಿ ಆಮಿಷ ಒಡ್ಡಲಾಗಿದೆ ಎಂದೂ ಅವರು ಹೇಳಿದ್ದಾರೆ.</p>.<p>ಪಕ್ಷಾಂತರ ಮಾಡಿರುವ 13 ಶಾಸಕರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳದಿರುವ ನೀತಿಯನ್ನು ಕಾಂಗ್ರೆಸ್ ಅನುಸರಿಸಿದೆ ಎಂದು ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸಿದ ಶಿವಕುಮಾರ್ ಹೇಳಿದರು.</p>.<p>‘ಬಿಜೆಪಿ ಹಣ ಬಲ ಬಳಸುತ್ತಿರುವುದು ಎಲ್ಲರಿಗೂ ಗೊತ್ತಿದೆ. ₹30 ಕೋಟಿಯಿಂದ ₹40 ಕೋಟಿ ವೆಚ್ಚ ಮಾಡಿದೆ. ಭಾರಿ ಮೊತ್ತ ನೀಡುವ ಭರವಸೆ ಕೊಡಲಾಗಿದೆ, ಮುಂಗಡವನ್ನೂ ನೀಡಲಾಗಿದೆ ಎಂದು ಕೆಲವು ಶಾಸಕರು ಸದನದಲ್ಲಿಯೇ ಹೇಳಿದ್ದರು. ಶಾಸಕರನ್ನು ಕುರಿ–ಮೇಕೆಗಳ ರೀತಿಯಲ್ಲಿ ಖರೀದಿ ಮಾಡಲಾಗಿದೆ. ಪ್ರಜಾಪ್ರಭುತ್ವ ಎಲ್ಲಿ ಹೋಯಿತು? ಪ್ರಜಾಪ್ರಭುತ್ವವು ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ಪಕ್ಷ ಬಿಟ್ಟ 13 ಶಾಸಕರಲ್ಲಿ ಹಲವರು ಮರಳಿ ಪಕ್ಷ ಸೇರುವುದಕ್ಕಾಗಿ ತಮ್ಮ ಜತೆ ಸಂಪರ್ಕದಲ್ಲಿದ್ದಾರೆ ಎಂದರು.</p>.<p>‘ಬಿಜೆಪಿ ಆಪರೇಷನ್ ಕಮಲ ನಡೆಸಿತು. ಪಕ್ಷಾಂತರಿಗಳು ಮರಳಿ ಬರಬಾರದು ಎಂಬ ನಿರ್ಧಾರಕ್ಕೆ ನಾವು ಬಂದಿದ್ದೇವೆ. 13 ಶಾಸಕರ ಪೈಕಿ 10 ಮಂದಿ ವಾಪಸ್ ಬರಲು ಸಿದ್ಧರಿದ್ದಾರೆ. ಅವರು ನನ್ನನ್ನು ಭೇಟಿಯಾಗಿದ್ದಾರೆ. ಕೆಲವರು ದೆಹಲಿಯಲ್ಲಿ ಭೇಟಿಯಾಗಿದ್ದರು. ನಾವು ಒಪ್ಪಿಲ್ಲ’ ಎಂದು ಶಿವಕುಮಾರ್ ತಿಳಿಸಿದ್ದಾರೆ.</p>.<p>‘ನಾವು ಹೊಸ ಮುಖಗಳನ್ನೇ ಆಯ್ಕೆ ಮಾಡಿಕೊಂಡಿದ್ದೇವೆ. ಪಕ್ಷ ಬಿಡುವುದಿಲ್ಲ ಎಂದು ಅವರು ಪ್ರತಿಜ್ಞೆಯನ್ನೂ ಮಾಡಿದ್ಧಾರೆ’ ಎಂದು ಅವರು ಹೇಳಿದ್ದಾರೆ.</p>.<p>ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಣ್ಕರ್ ಪ್ರಕಾರ, ಪಕ್ಷವು 36–37 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಸರಾಸರಿ ವಯಸ್ಸು 48 ಮೀರುವುದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ: </strong>ಗೋವಾದಲ್ಲಿ ಬಿಜೆಪಿಯು ಶಾಸಕರನ್ನು ಕುರಿ ಮತ್ತು ಮೇಕೆಗಳಂತೆ ಖರೀದಿ ಮಾಡಿತ್ತು ಎಂದು ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಆರೋಪಿಸಿದ್ದಾರೆ. ಒಬ್ಬೊಬ್ಬ ಶಾಸಕನನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ₹30 ಕೋಟಿ ಆಮಿಷ ಒಡ್ಡಲಾಗಿದೆ ಎಂದೂ ಅವರು ಹೇಳಿದ್ದಾರೆ.</p>.<p>ಪಕ್ಷಾಂತರ ಮಾಡಿರುವ 13 ಶಾಸಕರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳದಿರುವ ನೀತಿಯನ್ನು ಕಾಂಗ್ರೆಸ್ ಅನುಸರಿಸಿದೆ ಎಂದು ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸಿದ ಶಿವಕುಮಾರ್ ಹೇಳಿದರು.</p>.<p>‘ಬಿಜೆಪಿ ಹಣ ಬಲ ಬಳಸುತ್ತಿರುವುದು ಎಲ್ಲರಿಗೂ ಗೊತ್ತಿದೆ. ₹30 ಕೋಟಿಯಿಂದ ₹40 ಕೋಟಿ ವೆಚ್ಚ ಮಾಡಿದೆ. ಭಾರಿ ಮೊತ್ತ ನೀಡುವ ಭರವಸೆ ಕೊಡಲಾಗಿದೆ, ಮುಂಗಡವನ್ನೂ ನೀಡಲಾಗಿದೆ ಎಂದು ಕೆಲವು ಶಾಸಕರು ಸದನದಲ್ಲಿಯೇ ಹೇಳಿದ್ದರು. ಶಾಸಕರನ್ನು ಕುರಿ–ಮೇಕೆಗಳ ರೀತಿಯಲ್ಲಿ ಖರೀದಿ ಮಾಡಲಾಗಿದೆ. ಪ್ರಜಾಪ್ರಭುತ್ವ ಎಲ್ಲಿ ಹೋಯಿತು? ಪ್ರಜಾಪ್ರಭುತ್ವವು ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ಪಕ್ಷ ಬಿಟ್ಟ 13 ಶಾಸಕರಲ್ಲಿ ಹಲವರು ಮರಳಿ ಪಕ್ಷ ಸೇರುವುದಕ್ಕಾಗಿ ತಮ್ಮ ಜತೆ ಸಂಪರ್ಕದಲ್ಲಿದ್ದಾರೆ ಎಂದರು.</p>.<p>‘ಬಿಜೆಪಿ ಆಪರೇಷನ್ ಕಮಲ ನಡೆಸಿತು. ಪಕ್ಷಾಂತರಿಗಳು ಮರಳಿ ಬರಬಾರದು ಎಂಬ ನಿರ್ಧಾರಕ್ಕೆ ನಾವು ಬಂದಿದ್ದೇವೆ. 13 ಶಾಸಕರ ಪೈಕಿ 10 ಮಂದಿ ವಾಪಸ್ ಬರಲು ಸಿದ್ಧರಿದ್ದಾರೆ. ಅವರು ನನ್ನನ್ನು ಭೇಟಿಯಾಗಿದ್ದಾರೆ. ಕೆಲವರು ದೆಹಲಿಯಲ್ಲಿ ಭೇಟಿಯಾಗಿದ್ದರು. ನಾವು ಒಪ್ಪಿಲ್ಲ’ ಎಂದು ಶಿವಕುಮಾರ್ ತಿಳಿಸಿದ್ದಾರೆ.</p>.<p>‘ನಾವು ಹೊಸ ಮುಖಗಳನ್ನೇ ಆಯ್ಕೆ ಮಾಡಿಕೊಂಡಿದ್ದೇವೆ. ಪಕ್ಷ ಬಿಡುವುದಿಲ್ಲ ಎಂದು ಅವರು ಪ್ರತಿಜ್ಞೆಯನ್ನೂ ಮಾಡಿದ್ಧಾರೆ’ ಎಂದು ಅವರು ಹೇಳಿದ್ದಾರೆ.</p>.<p>ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಣ್ಕರ್ ಪ್ರಕಾರ, ಪಕ್ಷವು 36–37 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಸರಾಸರಿ ವಯಸ್ಸು 48 ಮೀರುವುದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>