ಮಧ್ಯಪ್ರದೇಶ, ಮಹಾರಾಷ್ಟ್ರದಂತೆ ಸರ್ಕಾರ ಉರುಳಿಸಲು ಯತ್ನಿಸಲಾಗುತ್ತಿದೆ. ದೆಹಲಿ ಚುನಾವಣೆಯಲ್ಲಿ ಬಿಜೆಪಿ ನಿರಂತರವಾಗಿ ಸೋಲುತ್ತಿದೆ. ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಪರಿಸ್ಥಿತಿ ನಿಮಗೂ ಬರಲಿದೆ ಎಂದು ಶಾಸಕರಿಗೆ ಬೆದರಿಕೆ ಹಾಕಲಾಗುತ್ತಿದೆ. ಬಿಜೆಪಿ ಇಂತಹ ಹೀನ ಕೃತ್ಯಗಳನ್ನು ನಿಲ್ಲಿಸಬೇಕು. ಎಷ್ಟು ಸಲ ಪ್ರಯತ್ನಿಸಿದರೂ ನಮ್ಮ ಶಾಸಕರಿಗೆ ಆಮಿಷ ಒಡ್ಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.