‘ರೈತರ ಪ್ರತಿಭಟನೆ, ಹೆಚ್ಚುತ್ತಿರುವ ನಿರುದ್ಯೋಗ, ಹಣದುಬ್ಬರ ಮತ್ತು ದೇಶವು ಎದುರಿಸುತ್ತಿರುವ ಇತರ ಸಮಸ್ಯೆಗಳು ನಮ್ಮ ಚರ್ಚೆಗಳ ಕೇಂದ್ರಬಿಂದುವಾಗಿರಬೇಕು. ಆದರೆ, ಈ ಪ್ರಮುಖ ವಿಷಯಗಳ ಬಗ್ಗೆ ಯಾವುದೇ ಚರ್ಚೆ ಇಲ್ಲ. ಉತ್ತರ ಪ್ರದೇಶದಲ್ಲಿ ಚುನಾವಣೆ ಹತ್ತಿರ ಬರುತ್ತಿರುವುದರಿಂದ, ತಾಲಿಬಾನ್ ಮತ್ತು ಅಫ್ಗಾನಿಸ್ತಾನದ ಬಗ್ಗೆ ಹೆಚ್ಚು ಚರ್ಚೆ ನಡೆಯಲಿದೆ. ಅಲ್ಲಿನ ಮಹಿಳೆಯರ ವಿರುದ್ಧ ತಾಲಿಬಾನ್ ಅಳವಡಿಸಿಕೊಂಡ ದಬ್ಬಾಳಿಕೆಯ ಕ್ರಮಗಳ ಬಗ್ಗೆ ಚರ್ಚೆಗಳಾಗುತ್ತವೆ. ಆದರೆ, ಅತ್ಯಾಚಾರ ಮತ್ತು ವರದಕ್ಷಿಣೆಯ ಸಾವುಗಳನ್ನು ಎದುರಿಸುತ್ತಿರುವ ಭಾರತದ ಮಹಿಳೆಯರ ಬಗ್ಗೆ ಯಾರೂ ಮಾತನಾಡುತ್ತಿಲ್ಲ’ ಎಂದು ಅವರು ದೂರಿದರು.