<p><strong>ಗೊಪಿಬಲ್ಲಾವ್ಪುರ(ಪಶ್ಚಿಮ ಬಂಗಾಳ):</strong> ‘ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನಾನು ಮನೆಯೊಳಗೆ ಇರಬೇಕೆಂದು ಬಿಜೆಪಿಯವರು ಬಯಸಿದ್ದರು‘ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆರೋಪಿಸಿದರು.</p>.<p>ಜಾಗ್ರಾಮ್ ಜಿಲ್ಲೆಯ ಗೋಪಿಬ್ಲ್ಲವ್ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಮತಾ, ‘ಈ ಹಿಂದೆ ಸಿಪಿಎಂ ಪಕ್ಷದವರೂ ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದರು. ಈಗ ಬಿಜೆಪಿ ಕೂಡ ಅದೇ ರೀತಿ ಮಾಡುತ್ತಿದೆ‘ ಎಂದು ಆರೋಪಿಸಿದರು.</p>.<p>ಗಾಲಿ ಕುರ್ಚಿಯಲ್ಲೇ ಕುಳಿತು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ‘ನಾನು ಚುನಾವಣೆ ವೇಳೆ ಹೊರಗೆ ಹೋಗದೇ, ಮನೆಯೊಳಗೆ ಕುಳಿತಿರಬೇಕೆಂದು ಬಿಜೆಪಿಯವರು ಬಯಸಿದ್ದರು. ಅದೇ ಕಾರಣಕ್ಕೆ ನನ್ನ ಎಡಗಾಲಿಗೆ ಗಾಯ ಮಾಡಿದ್ದಾರೆ‘ ಎಂದು ಆರೋಪಿಸಿದರು.</p>.<p>ಸ್ಥಳೀಯ ಟಿಎಂಸಿ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದ ಮಮತಾ ಬ್ಯಾನರ್ಜಿಯವರು ‘ಬಿಜೆಪಿಯವರು ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ನಾವು ಆ ಪಕ್ಷವನ್ನು ಸೋಲಿಸುತ್ತೇವೆ‘ ಎಂದು ಹೇಳಿದರು. ‘ನೀವು ನಮ್ಮ ಅಭ್ಯರ್ಥಿಗಳಿಗೆ ಮತ ನೀಡಿದರೆ, ನನಗೆ ನೀಡಿದಂತೆ‘ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೊಪಿಬಲ್ಲಾವ್ಪುರ(ಪಶ್ಚಿಮ ಬಂಗಾಳ):</strong> ‘ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನಾನು ಮನೆಯೊಳಗೆ ಇರಬೇಕೆಂದು ಬಿಜೆಪಿಯವರು ಬಯಸಿದ್ದರು‘ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆರೋಪಿಸಿದರು.</p>.<p>ಜಾಗ್ರಾಮ್ ಜಿಲ್ಲೆಯ ಗೋಪಿಬ್ಲ್ಲವ್ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಮತಾ, ‘ಈ ಹಿಂದೆ ಸಿಪಿಎಂ ಪಕ್ಷದವರೂ ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದರು. ಈಗ ಬಿಜೆಪಿ ಕೂಡ ಅದೇ ರೀತಿ ಮಾಡುತ್ತಿದೆ‘ ಎಂದು ಆರೋಪಿಸಿದರು.</p>.<p>ಗಾಲಿ ಕುರ್ಚಿಯಲ್ಲೇ ಕುಳಿತು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ‘ನಾನು ಚುನಾವಣೆ ವೇಳೆ ಹೊರಗೆ ಹೋಗದೇ, ಮನೆಯೊಳಗೆ ಕುಳಿತಿರಬೇಕೆಂದು ಬಿಜೆಪಿಯವರು ಬಯಸಿದ್ದರು. ಅದೇ ಕಾರಣಕ್ಕೆ ನನ್ನ ಎಡಗಾಲಿಗೆ ಗಾಯ ಮಾಡಿದ್ದಾರೆ‘ ಎಂದು ಆರೋಪಿಸಿದರು.</p>.<p>ಸ್ಥಳೀಯ ಟಿಎಂಸಿ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದ ಮಮತಾ ಬ್ಯಾನರ್ಜಿಯವರು ‘ಬಿಜೆಪಿಯವರು ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ನಾವು ಆ ಪಕ್ಷವನ್ನು ಸೋಲಿಸುತ್ತೇವೆ‘ ಎಂದು ಹೇಳಿದರು. ‘ನೀವು ನಮ್ಮ ಅಭ್ಯರ್ಥಿಗಳಿಗೆ ಮತ ನೀಡಿದರೆ, ನನಗೆ ನೀಡಿದಂತೆ‘ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>