ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿ ಸೋತ ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಮುಂದಾಗಿದೆ: ಸಿಸೋಡಿಯಾ

Last Updated 30 ಮಾರ್ಚ್ 2022, 14:27 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನಲ್ಲಿ ಸೋತ ಬಳಿಕ ಬಿಜೆಪಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆ ಮಾಡಲು ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

ಈ ಕುರಿತಂತೆ ಅಧಿಕೃತ ದೂರು ದಾಖಲಿಸುವುದಾಗಿ ಅವರು ಹೇಳಿದ್ದಾರೆ.

‘ಕಾಶ್ಮೀರ ಫೈಲ್ಸ್’ಸಿನಿಮಾ ಬಗ್ಗೆ ಕೇಜ್ರಿವಾಲ್ ಹೇಳಿಕೆ ಖಂಡಿಸಿ ಅವರ ಮನೆ ಮುಂದೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಬೆಳಗ್ಗೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಅವರು ಸಿಎಂ ಮನೆಯ ತಡೆ ದ್ವಾರ ಧ್ವಂಸಗೊಳಿಸಿ, ಸಿಸಿಟಿವಿ ಒಡೆದು ಹಾಕಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಸಿಸೋಡಿಯಾ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

‘ಪಂಜಾಬ್‌ನಲ್ಲಿ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಾಗದ ಬಿಜೆಪಿ, ಅವರನ್ನು ಕೊಲ್ಲಲು ಮುಂದಾಗಿದೆ. ಮುಖ್ಯಮಂತ್ರಿ ಮನೆ ಮೇಲೆ ಇಂದು ನಡೆದ ದಾಳಿಯು ಪೊಲೀಸರ ನೆರವಿನಿಂದ ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಮುಂದಾಗಿತ್ತು ಎಂಬುದನ್ನು ತೋರಿಸುತ್ತದೆ. ಇದರ ವಿರುದ್ಧ ನಾವು ಅಧಿಕೃತ ದೂರು ದಾಖಲಿಸುತ್ತೇವೆ’ಎಂದು ಸಿಸೋಡಿಯಾ ಹೇಳಿದರು.

ಕೇಜ್ರಿವಾಲ್ ಅವರ ಮನೆ ಮೇಲಿನ ‘ಜೀವ ಬೆದರಿಕೆಯ ದಾಳಿ ಯೋಜಿತ ಕೃತ್ಯವಾಗಿದೆ’ಎಂದು ಅವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT