<p><strong>ಲಖನೌ:</strong> ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಂತೆಯೇ ಆಡಳಿತರೂಢ ಬಿಜೆಪಿ ಶಾಸಕರು, ಒಬ್ಬರ ನಂತರ ಒಬ್ಬರಂತೆ ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷ (ಎಸ್ಪಿ) ಸೇರುತ್ತಿದ್ದಾರೆ.</p>.<p>ಇದನ್ನೇ ಉಲ್ಲೇಖ ಮಾಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಜೆಪಿ ವಿಕೆಟ್ಗಳು ಪತನಗೊಳ್ಳುತ್ತಿವೆ, ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರುವುದಿಲ್ಲ. ಒಂದು ವೇಳೆ ಗೊತ್ತಿದ್ದರೂ ಕ್ಯಾಚ್ ಕೈಚೆಲ್ಲುತ್ತಿದ್ದಾರೆಎಂದು ಲೇವಡಿ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/assembly-election-2022-political-parties-selecting-candidates-on-different-criteria-902118.html" itemprop="url">ವಿಧಾನಸಭೆ ಚುನಾವಣೆ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮಿತ್ರ ಪಕ್ಷಗಳ ಭಿನ್ನ ಮಾನದಂಡ </a></p>.<p>ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಡಿರುವ '80 ವರ್ಸಸ್ 20 ಸ್ಪರ್ಧೆ' (ಹಿಂದೂ ವರ್ಸಸ್ ಮುಸ್ಲಿಂ) ಹೇಳಿಕೆಗೆ ತಿರುಗೇಟು ನೀಡಿರುವ ಅಖಿಲೇಶ್, ಆದಿತ್ಯನಾಥ್ ಗಣಿತ ಶಿಕ್ಷಕರಾಗಬೇಕು ಎಂದು ಹೇಳಿದರು.</p>.<p>ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಇತರೆ ನಾಯಕರ ಸೇರ್ಪಡೆಯೊಂದಿಗೆ ಬಿಜೆಪಿ ಈಗ ಉಳಿದಿರುವ ಶೇ 20 ಕೂಡ ಕಳೆದುಕೊಳ್ಳಲಿದೆ. ಬಾಬಾ ಸಿಎಂ ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ದೆಹಲಿಯಿಂದ ಯಾರೇ ಬಂದರೂ ಅವರು ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದಿಲ್ಲ ಎಂದು ಹೇಳಿದರು.</p>.<p>ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಾದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಮತ್ತು ಇನ್ನೂ ಐವರು ಬಿಜೆಪಿ ಶಾಸಕರು ಸಮಾಜವಾದಿ ಪಕ್ಷ ಸೇರಿದ್ದಾರೆ.</p>.<p>ವರ್ಚುವಲ್ ಆಗಿ ಕಾರ್ಯಕ್ರಮ ನಡೆದರೂ ಸಮಾಜವಾದಿ ಪಕ್ಷದ ಪ್ರಧಾನ ಕಚೇರಿ ಸಮೀಪದಲ್ಲಿ 2,000ಕ್ಕೂ ಹೆಚ್ಚು ಮಂದಿ ಬೆಂಬಲಿಗರು ಜಮಾಯಿಸಿದ್ದರು. ಇದರಂತೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಂತೆಯೇ ಆಡಳಿತರೂಢ ಬಿಜೆಪಿ ಶಾಸಕರು, ಒಬ್ಬರ ನಂತರ ಒಬ್ಬರಂತೆ ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷ (ಎಸ್ಪಿ) ಸೇರುತ್ತಿದ್ದಾರೆ.</p>.<p>ಇದನ್ನೇ ಉಲ್ಲೇಖ ಮಾಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಜೆಪಿ ವಿಕೆಟ್ಗಳು ಪತನಗೊಳ್ಳುತ್ತಿವೆ, ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರುವುದಿಲ್ಲ. ಒಂದು ವೇಳೆ ಗೊತ್ತಿದ್ದರೂ ಕ್ಯಾಚ್ ಕೈಚೆಲ್ಲುತ್ತಿದ್ದಾರೆಎಂದು ಲೇವಡಿ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/assembly-election-2022-political-parties-selecting-candidates-on-different-criteria-902118.html" itemprop="url">ವಿಧಾನಸಭೆ ಚುನಾವಣೆ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮಿತ್ರ ಪಕ್ಷಗಳ ಭಿನ್ನ ಮಾನದಂಡ </a></p>.<p>ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಡಿರುವ '80 ವರ್ಸಸ್ 20 ಸ್ಪರ್ಧೆ' (ಹಿಂದೂ ವರ್ಸಸ್ ಮುಸ್ಲಿಂ) ಹೇಳಿಕೆಗೆ ತಿರುಗೇಟು ನೀಡಿರುವ ಅಖಿಲೇಶ್, ಆದಿತ್ಯನಾಥ್ ಗಣಿತ ಶಿಕ್ಷಕರಾಗಬೇಕು ಎಂದು ಹೇಳಿದರು.</p>.<p>ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಇತರೆ ನಾಯಕರ ಸೇರ್ಪಡೆಯೊಂದಿಗೆ ಬಿಜೆಪಿ ಈಗ ಉಳಿದಿರುವ ಶೇ 20 ಕೂಡ ಕಳೆದುಕೊಳ್ಳಲಿದೆ. ಬಾಬಾ ಸಿಎಂ ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ದೆಹಲಿಯಿಂದ ಯಾರೇ ಬಂದರೂ ಅವರು ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದಿಲ್ಲ ಎಂದು ಹೇಳಿದರು.</p>.<p>ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಾದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಮತ್ತು ಇನ್ನೂ ಐವರು ಬಿಜೆಪಿ ಶಾಸಕರು ಸಮಾಜವಾದಿ ಪಕ್ಷ ಸೇರಿದ್ದಾರೆ.</p>.<p>ವರ್ಚುವಲ್ ಆಗಿ ಕಾರ್ಯಕ್ರಮ ನಡೆದರೂ ಸಮಾಜವಾದಿ ಪಕ್ಷದ ಪ್ರಧಾನ ಕಚೇರಿ ಸಮೀಪದಲ್ಲಿ 2,000ಕ್ಕೂ ಹೆಚ್ಚು ಮಂದಿ ಬೆಂಬಲಿಗರು ಜಮಾಯಿಸಿದ್ದರು. ಇದರಂತೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>