ವಿಷ್ಣುಪುರದಲ್ಲಿ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು, ‘ಮುಷ್ಕರಗಳು, ಬಾಂಬ್ ಸ್ಫೋಟಗಳು, ಅಭದ್ರತೆಯ ವಾತಾವರಣದಲ್ಲಿದ್ದ ಮಣಿಪುರ ಈಗ ಅಭಿವೃದ್ಧಿಯ ಹಾದಿಯಲ್ಲಿದೆ. ಸರಿಯಾದ ಸಮಯದಲ್ಲಿ ಮಣಿಪುರದ ಜನ ಬಿಜೆಪಿಯನ್ನು ಆಯ್ಕೆ ಮಾಡಿದ್ದರಿಂದ ಇದು ಸಾಧ್ಯವಾಗಿದೆ. ಆತ್ಮ ನಿರ್ಭರ ಭಾರತ ಅಭಿಯಾನದಲ್ಲಿ ಈಶಾನ್ಯ ರಾಜ್ಯಗಳ ಪೈಕಿ ಮಣಿಪುರ ಮುಂಚೂಣಿಯಲ್ಲಿದೆ. ಎನ್.ಬೀರೇನ್ ಸಿಂಗ್ ಸರ್ಕಾರವು ರಾಜ್ಯದಲ್ಲಿ ಶಾಂತಿ ಸ್ಥಾಪಿಸುವುದರ ಜತೆಗೆ ಸಮುದಾಯಗಳನ್ನು ಒಗ್ಗೂಡಿಸಿದೆ. ಸ್ಥಿರತೆ ನಿರ್ಮಾಣ ಮಾಡಿದೆ’ ಎಂದು ಹೇಳಿದ್ದಾರೆ.