<p><strong>ಗುವಾಹಟಿ:</strong> 2017ರಿಂದ ಈವರೆಗಿನ ಅಭಿವೃದ್ಧಿ ಕಾರ್ಯಗಳಿಂದಾಗಿ ಮಣಿಪುರದಲ್ಲಿ ಎರಡನೇ ಬಾರಿಗೆ ಬಿಜೆಪಿ ಅಧಿಕಾರ ಸ್ವೀಕರಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ವಿಷ್ಣುಪುರದಲ್ಲಿ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು, ‘ಮುಷ್ಕರಗಳು, ಬಾಂಬ್ ಸ್ಫೋಟಗಳು, ಅಭದ್ರತೆಯ ವಾತಾವರಣದಲ್ಲಿದ್ದ ಮಣಿಪುರ ಈಗ ಅಭಿವೃದ್ಧಿಯ ಹಾದಿಯಲ್ಲಿದೆ. ಸರಿಯಾದ ಸಮಯದಲ್ಲಿ ಮಣಿಪುರದ ಜನ ಬಿಜೆಪಿಯನ್ನು ಆಯ್ಕೆ ಮಾಡಿದ್ದರಿಂದ ಇದು ಸಾಧ್ಯವಾಗಿದೆ. ಆತ್ಮ ನಿರ್ಭರ ಭಾರತ ಅಭಿಯಾನದಲ್ಲಿ ಈಶಾನ್ಯ ರಾಜ್ಯಗಳ ಪೈಕಿ ಮಣಿಪುರ ಮುಂಚೂಣಿಯಲ್ಲಿದೆ. ಎನ್.ಬೀರೇನ್ ಸಿಂಗ್ ಸರ್ಕಾರವು ರಾಜ್ಯದಲ್ಲಿ ಶಾಂತಿ ಸ್ಥಾಪಿಸುವುದರ ಜತೆಗೆ ಸಮುದಾಯಗಳನ್ನು ಒಗ್ಗೂಡಿಸಿದೆ. ಸ್ಥಿರತೆ ನಿರ್ಮಾಣ ಮಾಡಿದೆ’ ಎಂದು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/narendra-modi-way-ahead-of-rahul-gandhi-as-preferred-pm-choice-in-poll-bound-states-874151.html" itemprop="url">ಪ್ರಧಾನಿ ಗಾದಿಗೆ ರಾಹುಲ್ಗಿಂತ ಮೋದಿಯೇ ಸೂಕ್ತ: ಚುನಾವಣೆ ರಾಜ್ಯಗಳ ಸಮೀಕ್ಷಾ ವರದಿ</a></p>.<p>ನಡ್ಡಾ ಅವರು ಎರಡು ದಿನಗಳ ಮಣಿಪುರ ಪ್ರವಾಸದಲ್ಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆ ಬಗ್ಗೆ ಪರಿಶೀಲಿಸುವುದಕ್ಕಾಗಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> 2017ರಿಂದ ಈವರೆಗಿನ ಅಭಿವೃದ್ಧಿ ಕಾರ್ಯಗಳಿಂದಾಗಿ ಮಣಿಪುರದಲ್ಲಿ ಎರಡನೇ ಬಾರಿಗೆ ಬಿಜೆಪಿ ಅಧಿಕಾರ ಸ್ವೀಕರಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ವಿಷ್ಣುಪುರದಲ್ಲಿ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು, ‘ಮುಷ್ಕರಗಳು, ಬಾಂಬ್ ಸ್ಫೋಟಗಳು, ಅಭದ್ರತೆಯ ವಾತಾವರಣದಲ್ಲಿದ್ದ ಮಣಿಪುರ ಈಗ ಅಭಿವೃದ್ಧಿಯ ಹಾದಿಯಲ್ಲಿದೆ. ಸರಿಯಾದ ಸಮಯದಲ್ಲಿ ಮಣಿಪುರದ ಜನ ಬಿಜೆಪಿಯನ್ನು ಆಯ್ಕೆ ಮಾಡಿದ್ದರಿಂದ ಇದು ಸಾಧ್ಯವಾಗಿದೆ. ಆತ್ಮ ನಿರ್ಭರ ಭಾರತ ಅಭಿಯಾನದಲ್ಲಿ ಈಶಾನ್ಯ ರಾಜ್ಯಗಳ ಪೈಕಿ ಮಣಿಪುರ ಮುಂಚೂಣಿಯಲ್ಲಿದೆ. ಎನ್.ಬೀರೇನ್ ಸಿಂಗ್ ಸರ್ಕಾರವು ರಾಜ್ಯದಲ್ಲಿ ಶಾಂತಿ ಸ್ಥಾಪಿಸುವುದರ ಜತೆಗೆ ಸಮುದಾಯಗಳನ್ನು ಒಗ್ಗೂಡಿಸಿದೆ. ಸ್ಥಿರತೆ ನಿರ್ಮಾಣ ಮಾಡಿದೆ’ ಎಂದು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/narendra-modi-way-ahead-of-rahul-gandhi-as-preferred-pm-choice-in-poll-bound-states-874151.html" itemprop="url">ಪ್ರಧಾನಿ ಗಾದಿಗೆ ರಾಹುಲ್ಗಿಂತ ಮೋದಿಯೇ ಸೂಕ್ತ: ಚುನಾವಣೆ ರಾಜ್ಯಗಳ ಸಮೀಕ್ಷಾ ವರದಿ</a></p>.<p>ನಡ್ಡಾ ಅವರು ಎರಡು ದಿನಗಳ ಮಣಿಪುರ ಪ್ರವಾಸದಲ್ಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆ ಬಗ್ಗೆ ಪರಿಶೀಲಿಸುವುದಕ್ಕಾಗಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>