ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಸ್ಥಾನ ಸರ್ಕಾರ ಪತನಕ್ಕೆ ಮುಂದಾಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಪೂನಿಯಾ, ರಾಜ್ಯದ ಯುವಕರು ಮತ್ತು ರೈತರು ಅಶೋಕ್ ಗೆಹಲೋತ್ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿದ್ದಾರೆ. ಬಿಜೆಪಿಯು ಸರ್ಕಾರ ಪತನಗೊಳಿಸಲು ಮುಂದಾಗುವುದಿಲ್ಲ. ಅದಾಗಿಯೇ ಆಂತರಿಕ ಕಚ್ಚಾಟಗಳಿಂದ ಪತನವಾಗಲಿದೆ. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ಮತದಾರರೇ ಕಾಂಗ್ರೆಸ್ ಅನ್ನು ಉಚ್ಚಾಟಿಸಲಿದ್ದಾರೆ ಎಂದು ಹೇಳಿದ್ದಾರೆ.