ಲಖನೌ: ವಿಧಾನಸಭಾ ಚುನಾವಣಾ ಕಾವು ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರ ನಡುವೆ ವಾಕ್ಸಮರಕ್ಕೂ ದಾರಿ ಮಾಡಿಕೊಟ್ಟಿದೆ.
ಉತ್ತರ ಪ್ರದೇಶದಲ್ಲಿ ಕಳೆದ ಬಾರಿಯ ಫಲಿತಾಂಶಕ್ಕೆ ಹೋಲಿಸಿದರೆ, ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆದ್ದು, ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ನಾಯಕ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಸುದ್ದಿಸಂಸ್ಥೆ ಐಎಎನ್ಎಸ್ ಜತೆ ಮಾತನಾಡಿರುವ ಅವರು, ಬಿಜೆಪಿ ಚುನಾವಣೆಗೆ ಸದಾ ಸಿದ್ಧವಾಗಿರುತ್ತದೆ. ಮಾರ್ಚ್ 10 ರಂದು ಫಲಿತಾಂಶ ಬಂದ ಬಳಿಕ ಸಮಾಜವಾದಿ ಪಾರ್ಟಿ, ಬಹುಜನ ಸಮಾಜವಾದಿ ಪಾರ್ಟಿ ಮತ್ತು ಕಾಂಗ್ರೆಸ್ ಕಣ್ಮರೆಯಾಗಲಿವೆ ಎಂದಿದ್ದಾರೆ.
ವಿಧಾನಸಭಾ ಚುನಾವಣೆಯ ಬಳಿಕ ಪಕ್ಷ 2024ರ ಲೋಕಸಭಾ ಚುನಾವಣೆಗೆ ಸಜ್ಜಾಗಲಿದೆ. ಸೂಕ್ತ ತಯಾರಿಯನ್ನು ಬಿಜೆಪಿ ಆರಂಭಿಸಲಿದೆ ಎಂದು ಅವರು ಹೇಳಿದ್ದಾರೆ.