ವಿವಾದದ ಬಳಿಕ ಗುರುವಾರ ಮೊದಲ ಬಾರಿ ಸಂಸತ್ತಿಗೆ ಆಗಮಿಸಿದ್ದ ರಾಹುಲ್ ಗಾಂಧಿ, ತನಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಶುಕ್ರವಾರ ಕೂಡ ಸಂಸತ್ತಿಗೆ ಆಗಮಿಸಿದ್ದರು. ಆದರೆ ಗದ್ದಲದ ನಡುವೆ ಅವರಿಗೆ ಮಾತನಾಡುವ ಅವಕಾಶ ಸಿಕ್ಕಿಲ್ಲ. ಸದ್ಯ ಮುಂದಿನ ವಾರಕ್ಕೆ ಸದನವನ್ನು ಮುಂದೂಡಲಾಗಿದೆ.