ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸಿಂಧಿಯಾ ಬಾರಿಸಿದ ಚೆಂಡು BJP ಕಾರ್ಯಕರ್ತನ ಹಣೆಗೆ ತಗುಲಿ ಗಾಯ

ಸೌಹಾರ್ದ ಕ್ರಿಕೆಟ್ ಪಂದ್ಯದ ವೇಳೆ ಸಚಿವ ಬಾರಿಸಿದ ಚೆಂಡು, ಕ್ಯಾಚ್‌ ಕೈತಪ್ಪಿ ಗಾಯ
Last Updated 16 ಫೆಬ್ರುವರಿ 2023, 7:37 IST
ಅಕ್ಷರ ಗಾತ್ರ

ಭೋಪಾಲ್‌: ಸೌಹಾರ್ದ ಕ್ರಿಕೆಟ್‌ ಪಂದ್ಯದ ವೇಳೆ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಹೊಡೆದ ಚೆಂಡು ಬಿಜೆಪಿ ಕಾರ್ಯಕರ್ತರೊಬ್ಬರ ತಲೆಗೆ ತಗುಲಿ ಗಾಯಗೊಂಡ ಘಟನೆ ಇಲ್ಲಿ ಗುರುವಾರ ನಡೆದಿದೆ.

ಬೋಪಾಲ್‌ನ ತೌರಾದಲ್ಲಿ ಹೊಸದಾಗಿ ನಿರ್ಮಾಣ ಮಾಡಲಾಗಿರುವ ಕ್ರಿಕೆಟ್ ಮೈದಾನದಲ್ಲಿ ಸೌಹಾರ್ದ ಪಂದ್ಯ ಆಡುವ ವೇಳೆ ಈ ಘಟನೆ ಸಂಭವಿಸಿದೆ.

ಸಿಂಧಿಯಾ ಅವರು ಬಾರಿಸಿದ ಚೆಂಡನ್ನು ವಿಕಾಶ್‌ ಮಿಶ್ರಾ ಎಂಬವರು ಹಿಡಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಕ್ಯಾಚ್‌ ಕೈ ತಪ್ಪಿ ಚೆಂಡು ಹಣೆಗೆ ಬಡಿದಿದೆ. ಹಣೆಗೆ ಗಾಯವಾಗಿ ರಕ್ತ ಸೋರಲು ಆರಂಭಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಗುರುವಾರ ಬೆಳಿಗ್ಗೆ ಕ್ರೀಡಾಂಗಣ ಉದ್ಘಾಟನೆಯಾಗಿದ್ದು, ಬಳಿಕ ಈ ಪಂದ್ಯ ನಡೆದಿದೆ.

ಘಟನೆ ನಡೆದ ಕೂಡಲೇ ಪಂದ್ಯ ರದ್ದು ಮಾಡಲಾಗಿದ್ದು, ಗಾಯಾಳು ವಿಕಾಸ್‌ ಅವರನ್ನು ಸಂಜಯ್‌ ಗಾಂಧಿ ಮೆಡಿಕಲ್‌ ಕಾಲೇಜಿಗೆ ಕರೆದೊಯ್ಯಲಾಗಿದೆ. ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಹಾಗೂ ಬಿಜೆಪಿ ನಾಯಕರು ಗಾಯಾಳುವನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT