<p><strong>ಗಾಜಿಯಾಬಾದ್ (ಉ.ಪ್ರದೇಶ):</strong> ದೆಹಲಿ ಹಾಗೂ ಉತ್ತರ ಪ್ರದೇಶ ಗಡಿ ಪ್ರದೇಶವಾಗಿರುವ ಗಾಜಿಪುರದಲ್ಲಿ ಬುಧವಾರ ಬಿಜೆಪಿ ಬೆಂಬಲಿಗರು ಮತ್ತು ರೈತ ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ.</p>.<p>ಕೇಂದ್ರ ಕೃಷಿ ಕಾಯ್ದೆಗಳನ್ನುವಿರೋಧಿಸಿ ರೈತರು ಪ್ರಮುಖವಾಗಿ ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಬೆಂಬಲಿಗರು ಕಳೆದ ವರ್ಷ ನವೆಂಬರ್ ತಿಂಗಳಿಂದ ಈ ಪ್ರದೇಶದಲ್ಲಿ ಧರಣಿ ನಿರತರಾಗಿದ್ದಾರೆ. ಇದೇ ಪ್ರದೇಶದ ಫ್ಲೈಓವರ್ನಲ್ಲಿಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸುತ್ತಿದ್ದಾಗ ಈ ಘರ್ಷಣೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/uttar-pradesh-will-witness-democratic-revolution-in-2022-akhilesh-yadav-843744.html" itemprop="url">ಉತ್ತರ ಪ್ರದೇಶದಲ್ಲಿ 2022ರಲ್ಲಿ ಪ್ರಜಾಪ್ರಭುತ್ವ ಕ್ರಾಂತಿ: ಅಖಿಲೇಶ್ ಯಾದವ್ </a></p>.<p>ಬುಧವಾರ ಮಧ್ಯಾಹ್ನ 12ರ ಹೊತ್ತಿಗೆ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಮೆರವಣಿಗೆ ತಲುಪುತ್ತಿದ್ದಂತೆಯೇ ಘರ್ಷಣೆ ಉಂಟಾಗಿದೆ. ಎರಡು ಕಡೆಯವರು ಕೋಲುಗಳ ಸಹಾಯದಿಂದ ಜಗಳವಾಡಿದರು ಎಂದು ವರದಿಯಾಗಿದೆ.</p>.<p>ಬಿಜೆಪಿ ನಾಯಕ ಅಮಿತ್ ವಾಲ್ಮೀಕಿ ಅವರನ್ನು ಸ್ವಾಗತ ಕೋರುವ ಮೆರವಣಿಗೆಯ ವೇಳೆ ಘರ್ಷಣೆ ಉಂಟಾಗಿದೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹಾಗೂ ಚಿತ್ರಗಳು ಹರಿದಾಡಿದ್ದವು.</p>.<p>ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಮತ್ತು ಮಸಿ ಬಳಿಯಲು ಸರ್ಕಾರ ನಡೆಸಿದ ವ್ಯವಸ್ಥಿತ ಪಿತೂರಿ ಇದಾಗಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.</p>.<p>ಸ್ವಾಗತ ಮೆರವಣಿಗೆಯ ಹೆಸರಲ್ಲಿ ಘರ್ಷಣೆ ಮಾಡುತ್ತಿರುವ ಬಿಜೆಪಿ ಬೆಂಬಲಿಗರಿಗೆ ಅವಕಾಶ ನೀಡದಂತೆ ಜಿಲ್ಲಾಡಳಿತ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಅವರು ರೈತರೊಂದಿಗೆ ಕೆಟ್ಟದಾಗಿ ವರ್ತಿಸಿದರು. ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ವಾಹನಗಳನ್ನು ಅವರೇ ಧ್ವಂಸಗೊಳಿಸಿದರು. ಇದರ ವಿರುದ್ಧ ದೂರು ದಾಖಲಿಸಲಾಗುವುದು. ಸರ್ಕಾರದ ಈ ಪಿತೂರಿ ಯಶಸ್ವಿಯಾಗುವುದಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವ ಇಂತಹ ಪ್ರಯತ್ನಗಳನ್ನು ಹಿಂದೆಯೂ ನಡೆಸಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ವಕ್ತಾರ ಜಗ್ತಾರ್ ಸಿಂಗ್ ಬಾಜ್ವಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್ (ಉ.ಪ್ರದೇಶ):</strong> ದೆಹಲಿ ಹಾಗೂ ಉತ್ತರ ಪ್ರದೇಶ ಗಡಿ ಪ್ರದೇಶವಾಗಿರುವ ಗಾಜಿಪುರದಲ್ಲಿ ಬುಧವಾರ ಬಿಜೆಪಿ ಬೆಂಬಲಿಗರು ಮತ್ತು ರೈತ ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ.</p>.<p>ಕೇಂದ್ರ ಕೃಷಿ ಕಾಯ್ದೆಗಳನ್ನುವಿರೋಧಿಸಿ ರೈತರು ಪ್ರಮುಖವಾಗಿ ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಬೆಂಬಲಿಗರು ಕಳೆದ ವರ್ಷ ನವೆಂಬರ್ ತಿಂಗಳಿಂದ ಈ ಪ್ರದೇಶದಲ್ಲಿ ಧರಣಿ ನಿರತರಾಗಿದ್ದಾರೆ. ಇದೇ ಪ್ರದೇಶದ ಫ್ಲೈಓವರ್ನಲ್ಲಿಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸುತ್ತಿದ್ದಾಗ ಈ ಘರ್ಷಣೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/uttar-pradesh-will-witness-democratic-revolution-in-2022-akhilesh-yadav-843744.html" itemprop="url">ಉತ್ತರ ಪ್ರದೇಶದಲ್ಲಿ 2022ರಲ್ಲಿ ಪ್ರಜಾಪ್ರಭುತ್ವ ಕ್ರಾಂತಿ: ಅಖಿಲೇಶ್ ಯಾದವ್ </a></p>.<p>ಬುಧವಾರ ಮಧ್ಯಾಹ್ನ 12ರ ಹೊತ್ತಿಗೆ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಮೆರವಣಿಗೆ ತಲುಪುತ್ತಿದ್ದಂತೆಯೇ ಘರ್ಷಣೆ ಉಂಟಾಗಿದೆ. ಎರಡು ಕಡೆಯವರು ಕೋಲುಗಳ ಸಹಾಯದಿಂದ ಜಗಳವಾಡಿದರು ಎಂದು ವರದಿಯಾಗಿದೆ.</p>.<p>ಬಿಜೆಪಿ ನಾಯಕ ಅಮಿತ್ ವಾಲ್ಮೀಕಿ ಅವರನ್ನು ಸ್ವಾಗತ ಕೋರುವ ಮೆರವಣಿಗೆಯ ವೇಳೆ ಘರ್ಷಣೆ ಉಂಟಾಗಿದೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹಾಗೂ ಚಿತ್ರಗಳು ಹರಿದಾಡಿದ್ದವು.</p>.<p>ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಮತ್ತು ಮಸಿ ಬಳಿಯಲು ಸರ್ಕಾರ ನಡೆಸಿದ ವ್ಯವಸ್ಥಿತ ಪಿತೂರಿ ಇದಾಗಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.</p>.<p>ಸ್ವಾಗತ ಮೆರವಣಿಗೆಯ ಹೆಸರಲ್ಲಿ ಘರ್ಷಣೆ ಮಾಡುತ್ತಿರುವ ಬಿಜೆಪಿ ಬೆಂಬಲಿಗರಿಗೆ ಅವಕಾಶ ನೀಡದಂತೆ ಜಿಲ್ಲಾಡಳಿತ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಅವರು ರೈತರೊಂದಿಗೆ ಕೆಟ್ಟದಾಗಿ ವರ್ತಿಸಿದರು. ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ವಾಹನಗಳನ್ನು ಅವರೇ ಧ್ವಂಸಗೊಳಿಸಿದರು. ಇದರ ವಿರುದ್ಧ ದೂರು ದಾಖಲಿಸಲಾಗುವುದು. ಸರ್ಕಾರದ ಈ ಪಿತೂರಿ ಯಶಸ್ವಿಯಾಗುವುದಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವ ಇಂತಹ ಪ್ರಯತ್ನಗಳನ್ನು ಹಿಂದೆಯೂ ನಡೆಸಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ವಕ್ತಾರ ಜಗ್ತಾರ್ ಸಿಂಗ್ ಬಾಜ್ವಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>