ಸ್ವಾಗತ ಮೆರವಣಿಗೆಯ ಹೆಸರಲ್ಲಿ ಘರ್ಷಣೆ ಮಾಡುತ್ತಿರುವ ಬಿಜೆಪಿ ಬೆಂಬಲಿಗರಿಗೆ ಅವಕಾಶ ನೀಡದಂತೆ ಜಿಲ್ಲಾಡಳಿತ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಅವರು ರೈತರೊಂದಿಗೆ ಕೆಟ್ಟದಾಗಿ ವರ್ತಿಸಿದರು. ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ವಾಹನಗಳನ್ನು ಅವರೇ ಧ್ವಂಸಗೊಳಿಸಿದರು. ಇದರ ವಿರುದ್ಧ ದೂರು ದಾಖಲಿಸಲಾಗುವುದು. ಸರ್ಕಾರದ ಈ ಪಿತೂರಿ ಯಶಸ್ವಿಯಾಗುವುದಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವ ಇಂತಹ ಪ್ರಯತ್ನಗಳನ್ನು ಹಿಂದೆಯೂ ನಡೆಸಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ವಕ್ತಾರ ಜಗ್ತಾರ್ ಸಿಂಗ್ ಬಾಜ್ವಾ ಹೇಳಿದ್ದಾರೆ.