ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಪೊರೇಟ್ ಸ್ನೇಹಿತರಿಗೆ ಮಾತ್ರ ಬಿಜೆಪಿ ನೆರವು: ಪ್ರಿಯಾಂಕಾ ಗಾಂಧಿ ವಾದ್ರಾ

Last Updated 4 ಫೆಬ್ರುವರಿ 2022, 14:40 IST
ಅಕ್ಷರ ಗಾತ್ರ

ಗಾಜಿಯಾಬಾದ್: ದೊಡ್ಡ, ಕಾರ್ಪೊರೇಟ್ ಸ್ನೇಹಿತರಿಗಾಗಿ ಬಿಜೆಪಿ ನೆರವು ಮಾಡುತ್ತಿದ್ದು, ಬಡವರು ಮತ್ತು ಸಣ್ಣ ವ್ಯಾಪಾರಿಗಳ ಬಗ್ಗೆ ಚಿಂತೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಆರೋಪಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮನೆ-ಮನೆ ಪ್ರಚಾರದಲ್ಲಿ ಭಾಗಿಯಾದ ಪ್ರಿಯಾಂಕಾ ಈ ಬಾರಿ ಉತ್ತರ ಪ್ರದೇಶದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂದು ಹೇಳಿದ್ದಾರೆ.

'ನಾವು ಎಲ್ಲೇ ಪ್ರಚಾರ ಮಾಡಿದರೂ ಜನರು ಅತ್ಯುತ್ಸಾಹದಿಂದ ಭಾಗವಹಿಸುತ್ತಾರೆ. ಈ ಸಂಭ್ರಮ ಉತ್ತರ ಪ್ರದೇಶದಲ್ಲಿ ರಾಜಕೀಯ ಬದಲಾವಣೆಯ ಅಲೆಯಾಗಿ ಬದಲಾಗಲಿದೆ' ಎಂಬ ಭರವಸೆ ನನಗಿದೆ ಎಂದು ಹೇಳಿದರು.

'ನೋಟು ರದ್ಧತಿ, ಲೌಕ್‌ಡೌನ್ ಸಮಯದಲ್ಲಿ ಜನರಿಗೆ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಸರ್ಕಾರ ತನ್ನ ದೊಡ್ಡ ಕಾರ್ಪೊರೇಟ್ ಸ್ನೇಹಿತರಿಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಸಣ್ಣ ವ್ಯಾಪಾರಿಗಳು, ಬಡವರು ಹಾಗೂ ಇತರರಿಗೆ ಯಾವುದೇ ಸ್ಥಾನವಿಲ್ಲ' ಎಂದು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT