ಮುಂಬೈ: ಸೊಕ್ಕಿನ ಕಾರಣದಿಂದ ಬಿಜೆಪಿಗೆ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲು ಎದುರಾಗಿದೆ ಎಂದು ಶಿವಸೇನಾ ಪಕ್ಷವು ಮಂಗಳವಾರ ಆರೋಪಿಸಿದೆ.
ಪಕ್ಷದ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಕುರಿತು ಉಲ್ಲೇಖ ಮಾಡಲಾಗಿದ್ದು, ಮಹಾರಾಷ್ಟ್ರದಲ್ಲೂ ಅಸಹಿಷ್ಣುತೆಯಿಂದಾಗಿ ಬಿಜೆಪಿ ಅಧಿಕಾರದಿಂದ ಹೊರಗುಳಿದಿದೆ ಎಂದು ದೂರಿದೆ.