<p><strong>ಮುಂಬೈ: </strong>ಸೊಕ್ಕಿನ ಕಾರಣದಿಂದ ಬಿಜೆಪಿಗೆ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲು ಎದುರಾಗಿದೆ ಎಂದು ಶಿವಸೇನಾ ಪಕ್ಷವು ಮಂಗಳವಾರ ಆರೋಪಿಸಿದೆ.<br /><br />ಪಕ್ಷದ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಕುರಿತು ಉಲ್ಲೇಖ ಮಾಡಲಾಗಿದ್ದು, ಮಹಾರಾಷ್ಟ್ರದಲ್ಲೂ ಅಸಹಿಷ್ಣುತೆಯಿಂದಾಗಿ ಬಿಜೆಪಿ ಅಧಿಕಾರದಿಂದ ಹೊರಗುಳಿದಿದೆ ಎಂದು ದೂರಿದೆ.</p>.<p>ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದುರಹಂಕಾರವೂ ಸೋಲಿಗೆ ಕಾರಣವಾಗಿದೆ. ಈ ಸೋಲಿನಿಂದಾಗಿ ಮಹಾರಾಷ್ಟ್ರ ಉಪಚುನಾವಣೆಯಲ್ಲಿ ಗಳಿಸಿದ ಗೆಲುವನ್ನು ಬಿಜೆಪಿ ಆನಂದಿಸಲು ಸಾಧ್ಯವಾಗಿಲ್ಲ. ಎಲ್ಲರೂ ಬಿಜೆಪಿ ಅಭ್ಯರ್ಥಿಯನ್ನು ಅಭಿನಂದಿಸಿದರು. ಆದರೆ ಯಾವ ಎಂವಿಎ ಮುಖಂಡರು ವಿಜೇತರನ್ನು ಅಭಿನಂದಿಸಿದವರಿಗೆ ಬೆದರಿಕೆ ಹಾಕಲಿಲ್ಲ ಎಂದು ಹೇಳಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/remember-tmc-mps-cm-also-have-to-come-to-delhi-parvesh-singhs-warning-after-bengal-violence-827897.html" itemprop="url">ಟಿಎಂಸಿ ಗೂಂಡಾಗಳಿಂದಲೇ ಪಶ್ಚಿಮ ಬಂಗಾಳ ಹಿಂಸಾಚಾರ: ಬಿಜೆಪಿ ಸಂಸದ ಪರ್ವೇಶ್ ಸಿಂಗ್ </a></p>.<p>ಇತ್ತೀಚಿನ ಪಶ್ವಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ದಾಖಲಿಸಿ ಅಧಿಕಾರಉಳಿಸಿಕೊಂಡಿತ್ತು. ಬಿಜೆಪಿ ತನ್ನ ಸಂಖ್ಯಾ ಬಲವನ್ನು ಉತ್ತಮಗೊಳಿಸಿದರೂ ಗದ್ದುಗೆಗೇರುವ ಕನಸು ಕನಸಾಗಿಯೇ ಉಳಿದಿದೆ.</p>.<p>292 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 213 ಹಾಗೂ ಬಿಜೆಪಿ 77 ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.</p>.<p>ಮಹಾರಾಷ್ಟ್ರ ಯಾವಾಗ ಅಸಹಿಷ್ಣುತೆಗೆ ಒಳಗಾಯಿತು? ಎಂದು ಸಂಪಾದಕೀಯದಲ್ಲಿ ಶಿವಸೇನಾ ಪ್ರಶ್ನಿಸಿದೆ. 2019ರಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಳಿಕ ದೀರ್ಘಾವಧಿಯ ಮಿತ್ರ ಪಕ್ಷಗಳಾದ ಶಿವಸೇನೆ ಹಾಗೂ ಬಿಜೆಪಿ ಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಳ್ಳುವ ವಿಷಯದಲ್ಲಿ ಭಿನ್ನಮತ ಸ್ಫೋಟಗೊಂಡು ಬೇರ್ಪಟ್ಟಿದ್ದವು.</p>.<p>ಬಳಿಕ ಕಾಂಗ್ರೆಸ್ ಹಾಗೂ ಎನ್ಸಿಪಿ ಜೊತೆ ಒಪ್ಪಂದ ಮಾಡಿದ್ದ ಶಿವಸೇನೆ, ಸರ್ಕಾರ ರಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಸೊಕ್ಕಿನ ಕಾರಣದಿಂದ ಬಿಜೆಪಿಗೆ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲು ಎದುರಾಗಿದೆ ಎಂದು ಶಿವಸೇನಾ ಪಕ್ಷವು ಮಂಗಳವಾರ ಆರೋಪಿಸಿದೆ.<br /><br />ಪಕ್ಷದ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಕುರಿತು ಉಲ್ಲೇಖ ಮಾಡಲಾಗಿದ್ದು, ಮಹಾರಾಷ್ಟ್ರದಲ್ಲೂ ಅಸಹಿಷ್ಣುತೆಯಿಂದಾಗಿ ಬಿಜೆಪಿ ಅಧಿಕಾರದಿಂದ ಹೊರಗುಳಿದಿದೆ ಎಂದು ದೂರಿದೆ.</p>.<p>ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದುರಹಂಕಾರವೂ ಸೋಲಿಗೆ ಕಾರಣವಾಗಿದೆ. ಈ ಸೋಲಿನಿಂದಾಗಿ ಮಹಾರಾಷ್ಟ್ರ ಉಪಚುನಾವಣೆಯಲ್ಲಿ ಗಳಿಸಿದ ಗೆಲುವನ್ನು ಬಿಜೆಪಿ ಆನಂದಿಸಲು ಸಾಧ್ಯವಾಗಿಲ್ಲ. ಎಲ್ಲರೂ ಬಿಜೆಪಿ ಅಭ್ಯರ್ಥಿಯನ್ನು ಅಭಿನಂದಿಸಿದರು. ಆದರೆ ಯಾವ ಎಂವಿಎ ಮುಖಂಡರು ವಿಜೇತರನ್ನು ಅಭಿನಂದಿಸಿದವರಿಗೆ ಬೆದರಿಕೆ ಹಾಕಲಿಲ್ಲ ಎಂದು ಹೇಳಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/remember-tmc-mps-cm-also-have-to-come-to-delhi-parvesh-singhs-warning-after-bengal-violence-827897.html" itemprop="url">ಟಿಎಂಸಿ ಗೂಂಡಾಗಳಿಂದಲೇ ಪಶ್ಚಿಮ ಬಂಗಾಳ ಹಿಂಸಾಚಾರ: ಬಿಜೆಪಿ ಸಂಸದ ಪರ್ವೇಶ್ ಸಿಂಗ್ </a></p>.<p>ಇತ್ತೀಚಿನ ಪಶ್ವಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ದಾಖಲಿಸಿ ಅಧಿಕಾರಉಳಿಸಿಕೊಂಡಿತ್ತು. ಬಿಜೆಪಿ ತನ್ನ ಸಂಖ್ಯಾ ಬಲವನ್ನು ಉತ್ತಮಗೊಳಿಸಿದರೂ ಗದ್ದುಗೆಗೇರುವ ಕನಸು ಕನಸಾಗಿಯೇ ಉಳಿದಿದೆ.</p>.<p>292 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 213 ಹಾಗೂ ಬಿಜೆಪಿ 77 ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.</p>.<p>ಮಹಾರಾಷ್ಟ್ರ ಯಾವಾಗ ಅಸಹಿಷ್ಣುತೆಗೆ ಒಳಗಾಯಿತು? ಎಂದು ಸಂಪಾದಕೀಯದಲ್ಲಿ ಶಿವಸೇನಾ ಪ್ರಶ್ನಿಸಿದೆ. 2019ರಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಳಿಕ ದೀರ್ಘಾವಧಿಯ ಮಿತ್ರ ಪಕ್ಷಗಳಾದ ಶಿವಸೇನೆ ಹಾಗೂ ಬಿಜೆಪಿ ಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಳ್ಳುವ ವಿಷಯದಲ್ಲಿ ಭಿನ್ನಮತ ಸ್ಫೋಟಗೊಂಡು ಬೇರ್ಪಟ್ಟಿದ್ದವು.</p>.<p>ಬಳಿಕ ಕಾಂಗ್ರೆಸ್ ಹಾಗೂ ಎನ್ಸಿಪಿ ಜೊತೆ ಒಪ್ಪಂದ ಮಾಡಿದ್ದ ಶಿವಸೇನೆ, ಸರ್ಕಾರ ರಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>