ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಿಕಾರಕ ರಾಸಾಯನಿಕದ ಬಣ್ಣ ಎರಚಿದ ಟಿಎಂಸಿ ಬೆಂಬಲಿಗರು: ಬಿಜೆಪಿಯ ಲಾಕೆಟ್ ಚಟರ್ಜಿ

Last Updated 30 ಮಾರ್ಚ್ 2021, 8:37 IST
ಅಕ್ಷರ ಗಾತ್ರ

ಕೋಲ್ಕತ್ತ: ವಿಧಾನಸಭಾ ಚುನಾವಣೆ ಅಂಗವಾಗಿ ಶನಿವಾರ ಹೂಗ್ಲಿಯಲ್ಲಿ ಪ್ರಚಾರ ನಡೆಸುತ್ತಿರುವಾಗನನ್ನ ಮುಖಕ್ಕೆ 'ಹಾನಿಕಾರಕ ರಾಸಾಯನಿಕಗಳು' ಇರುವ ಬಣ್ಣವನ್ನು ಎಸೆಯಲಾಗಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಲಾಕೆಟ್ ಚಟರ್ಜಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಒರಟಾದ ವಸ್ತುವನ್ನು ನನ್ನ ಮೇಲೆ ಎಸೆಯಲಾಯಿತು. ಅದನ್ನು ಯಾರು ಎಸೆದರು ಎಂದು ನಾನು ನೋಡಿದಾಗ, ಟಿಎಂಸಿ ಬ್ಯಾಡ್ಜ್ ಧರಿಸಿದ ಮೂರ್ನಾಲ್ಕು ಜನರು ಹತ್ತಿರದಲ್ಲಿ ನಿಂತಿರುವುದು ಕಂಡಿತು. ಅವರೇ ನನ್ನ ಮೇಲೆ ಎಸೆದಿದ್ದಾರೆ' ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಇದು 'ಹೇಡಿತನದ ಕೃತ್ಯ' ಎಂದು ಕರೆದಿದೆ.

'ಕೊಡಾಲಿಯಾ ನಂ 2 ಮತ್ತು ಜಿ.ಪಿ. ಪ್ರಧಾನ್ ಬಿದ್ಯುತ್ ಬಿಸ್ವಾಸ್ ನೇತೃತ್ವದ ಟಿಎಂಸಿ ಗೂಂಡಾಗಳು ಚಿನ್ಸುರಾ ಅಸೆಂಬ್ಲಿಯ ಬಿಜೆಪಿ ಅಭ್ಯರ್ಥಿ ಲಾಕೆಟ್ ಚಟರ್ಜಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ದ್ವೇಷ, ಹಿಂಸೆ ಮತ್ತು ಕಿರುಕುಳದ 'ಖೇಲಾ' ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಸೋಲಿನ ಭಯದಿಂದಾಗಿ ಮಹಿಳೆಯರಿಗೆ ಕಿರುಕುಳ ನೀಡುವ ಈ ಹೇಡಿತನದ 'ಖೇಲಾ'ವನ್ನು ಮಾಡಲಾಗಿದೆ!' ಎಂದು ಬಂಗಾಳದ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಡ ಟಿಎಂಸಿಯನ್ನು ಸೋಲಿಸಲು ಪಣ ತೊಟ್ಟಿರುವ ಬಿಜೆಪಿ ತನ್ನ ಅಭಿಯಾನವನ್ನು ಆಕ್ರಮಣಕಾರಿಯಾಗಿ ನಡೆಸುತ್ತಿದೆ. ಚುನಾವಣೆಯಲ್ಲಿ ಬಹುಮತವನ್ನು ಪಡೆದುಕೊಳ್ಳುವುದಾಗಿ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಉಚ್ಚಾಟಿಸುವುದಾಗಿ ಪ್ರತಿಜ್ಞೆ ಮಾಡಿದೆ. ಗೆಲುವು ಪಡೆದೇ ತೀರಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು ವಿವಿಧ ಕೇಂದ್ರ ಸಚಿವರವರೆಗೆ ಪಕ್ಷವು ಅನೇಕ ಸ್ಟಾರ್ ಪ್ರಚಾರಕರನ್ನು ಕಣಕ್ಕಿಳಿಸಿದೆ.

ವಿವಿಧ ಟಿಎಂಸಿ ನಾಯಕರು ಟಿಎಂಸಿಯನ್ನು ತ್ಯಜಿಸಿ ಬಿಜೆಪಿಗೆ ಸೇರಿರುವುದು ಪಕ್ಷಕ್ಕೆ ವಿಶ್ವಾಸವನ್ನು ನೀಡಿದೆ. ಟಿಎಂಸಿಯ ಪ್ರಮುಖ ನಾಯಕರಲ್ಲಿ ಒಬ್ಬರಾದ ಸ್ಥಳೀಯವಾಗಿ ಬಲಿಷ್ಠವಾಗಿದ್ದ ಸುವೇಂದು ಅಧಿಕಾರಿ ಡಿಸೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ನಂದಿಗ್ರಾಮದಿಂದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT