ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಸುವೇಂದು ಅಧಿಕಾರಿ ಅಪರಾಧಿಗಳಿಗೆ ಆಶ್ರಯ ನೀಡಿದ್ದಾರೆ: ಟಿಎಂಸಿ ದೂರು

Last Updated 23 ಮಾರ್ಚ್ 2021, 13:07 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ನಂದಿಗ್ರಾಮದಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ 'ಅಪರಾಧಿಗಳಿಗೆ ಆಶ್ರಯ ನೀಡಿದ್ದಾರೆ' ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಹೊರಗಿನ ಹೈ-ಪ್ರೊಫೈಲ್ ವ್ಯಕ್ತಿಗಳು ಅಲ್ಲಿ ನಾಲ್ಕು ಸ್ಥಳಗಳಲ್ಲಿ ತಂಗಿದ್ದಾರೆ. ಸುವೇಂದು ಅಧಿಕಾರಿಯು ಈ ಸ್ಥಳಗಳಲ್ಲಿ ಒಂದಕ್ಕೆ ಭೇಟಿ ನೀಡಿದ್ದಾರೆ ಎಂದು ಆಡಳಿತಾರೂಢ ಪಕ್ಷವು ಆರೋಪಿಸಿದೆ.

'ನಂದಿಗ್ರಾಮದಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿರುವ ಅಭ್ಯರ್ಥಿ ಸುವೇಂದು ಅಧಿಕಾರಿಯು ನಂದಿಗ್ರಾಮದ ನಿವಾಸಿಗಳಲ್ಲದ ಅಪರಾಧಿಗಳಿಗೆ ಆಶ್ರಯ ನೀಡುತ್ತಿದ್ದಾರೆ ಎಂಬುದು ನಮ್ಮ ಅರಿವಿಗೆ ಬಂದಿದೆ' ಎಂದು ಮಾ. 22 ರ ಪತ್ರದಲ್ಲಿ ತಿಳಿಸಲಾಗಿದೆ.

ಸ್ಥಳೀಯ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪತ್ರದಲ್ಲಿ ಆರೋಪಿಸಿರುವ ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ ಬ್ರಿಯಾನ್ ಅವರು, ಈ ವಿಷಯದಲ್ಲಿ ಚುನಾವಣಾ ಆಯೋಗ ಮಧ್ಯೆ ಪ್ರವೇಶಿಸುವಂತೆ ಕೋರಿದ್ದಾರೆ.

'ಸುವೇಂದು ಅಧಿಕಾರಿ ನೇಮಕ ಮಾಡಿಕೊಂಡಿರುವ ಮತ್ತು ಆಶ್ರಯ ನೀಡಿರುವ ಹೊರಗಿನ ಎಲ್ಲ ಸಾಮಾಜಿಕ ವಿರೋಧಿ ಅಂಶಗಳನ್ನು ಬಂಧಿಸಲು ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಬೇಕು ಎಂದು ನಾವು ವಿನಂತಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 1 ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT