ಪ್ರತಿಷ್ಠಿತ ಜಿ–20 ಅಧ್ಯಕ್ಷತೆಯನ್ನು ಭಾರತ ವಹಿಸಿಕೊಂಡಿರುವುದು ದೇಶದಲ್ಲಿ ಹೊಸ ಇತಿಹಾಸ ಬರೆದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದೇ ವೇಳೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದುಳಿದ ಜನರ ಹೆಸರಿನಲ್ಲಿ ರಾಜಕೀಯ ಮಾಡುವ ಮೂಲಕ ಉತ್ತರ ಪ್ರದೇಶದಲ್ಲಿ ಅಧಿಕಾರ ಪಡೆದ ಪಕ್ಷಗಳ ನಾಯಕರು ಮತ್ತು ಮುಖಂಡರು ತಮ್ಮ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಮಾತ್ರ ಲಾಭ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.