<div dir="ltr"><p class="bodytext" style="margin-bottom:0cm;"><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರ ‘ನವಭಾರತ’ದ ದೃಷ್ಟಿಕೋನವನ್ನು ದೇಶದಾದ್ಯಂತ ಕೊಂಡೊಯ್ಯಲು ಬಿಜೆಪಿಯ ಯುವ ಘಟಕವು ‘ಯುವ ಸಂಕಲ್ಪ ಯಾತ್ರೆ’ಯನ್ನು ವರ್ಷಪೂರ್ತಿ ಕೈಗೊಂಡಿದ್ದು, ಸ್ವಾತಂತ್ರ್ಯ ದಿನದಂದು ಯಾತ್ರೆಗೆ ಚಾಲನೆ ದೊರೆಯಲಿದೆ.</p><p class="bodytext" style="margin-bottom:0cm;">‘10 ಲಕ್ಷಕ್ಕೂ ಹೆಚ್ಚು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಸ್ವಯಂಸೇವಕರು ಸಂಘಟನೆಯ 13,350 ಮಂಡಲಗಳಲ್ಲಿ ರಾಷ್ಟ್ರಗೀತೆಯ ಸಾಮೂಹಿಕ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 15ರಂದು ಉದಯಪುರದಲ್ಲಿ ಯುವ ಸಂಕಲ್ಪ ಯಾತ್ರೆಯನ್ನು ಆರಂಭಿಸಲಾಗುವುದು’ ಎಂದು ಬಿಜೆವೈಎಂ ಅಧ್ಯಕ್ಷ ತೇಜಸ್ವಿ ಸೂರ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p><p class="bodytext" style="margin-bottom:0cm;">‘ಗುಜರಾತ್ನ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ಕರ್ನಾಟಕದ 37 ಸ್ಥಳಗಳಲ್ಲಿ ಯಾತ್ರೆಯನ್ನು ಕೈಗೊಳ್ಳಲಾಗುವುದು. ಯಾತ್ರೆಯ ಅಂಗವಾಗಿ ಮೂರು ದಿನಗಳ ಮ್ಯಾರಥಾನ್ ನಡೆಯಲಿದೆ. ಅಂತೆಯೇ 75 ಸ್ಥಳಗಳಲ್ಲಿ 75 ಕಿ.ಮೀ.ಗಳ ಸೈಕಲ್ ರ್ಯಾಲಿಯನ್ನೂ ಆಯೋಜಿಸಲಾಗಿದೆ’ ಎಂದೂ ಅವರು ಹೇಳಿದರು</p><p class="bodytext" style="margin-bottom:0cm;"></p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div dir="ltr"><p class="bodytext" style="margin-bottom:0cm;"><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರ ‘ನವಭಾರತ’ದ ದೃಷ್ಟಿಕೋನವನ್ನು ದೇಶದಾದ್ಯಂತ ಕೊಂಡೊಯ್ಯಲು ಬಿಜೆಪಿಯ ಯುವ ಘಟಕವು ‘ಯುವ ಸಂಕಲ್ಪ ಯಾತ್ರೆ’ಯನ್ನು ವರ್ಷಪೂರ್ತಿ ಕೈಗೊಂಡಿದ್ದು, ಸ್ವಾತಂತ್ರ್ಯ ದಿನದಂದು ಯಾತ್ರೆಗೆ ಚಾಲನೆ ದೊರೆಯಲಿದೆ.</p><p class="bodytext" style="margin-bottom:0cm;">‘10 ಲಕ್ಷಕ್ಕೂ ಹೆಚ್ಚು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಸ್ವಯಂಸೇವಕರು ಸಂಘಟನೆಯ 13,350 ಮಂಡಲಗಳಲ್ಲಿ ರಾಷ್ಟ್ರಗೀತೆಯ ಸಾಮೂಹಿಕ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 15ರಂದು ಉದಯಪುರದಲ್ಲಿ ಯುವ ಸಂಕಲ್ಪ ಯಾತ್ರೆಯನ್ನು ಆರಂಭಿಸಲಾಗುವುದು’ ಎಂದು ಬಿಜೆವೈಎಂ ಅಧ್ಯಕ್ಷ ತೇಜಸ್ವಿ ಸೂರ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p><p class="bodytext" style="margin-bottom:0cm;">‘ಗುಜರಾತ್ನ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ಕರ್ನಾಟಕದ 37 ಸ್ಥಳಗಳಲ್ಲಿ ಯಾತ್ರೆಯನ್ನು ಕೈಗೊಳ್ಳಲಾಗುವುದು. ಯಾತ್ರೆಯ ಅಂಗವಾಗಿ ಮೂರು ದಿನಗಳ ಮ್ಯಾರಥಾನ್ ನಡೆಯಲಿದೆ. ಅಂತೆಯೇ 75 ಸ್ಥಳಗಳಲ್ಲಿ 75 ಕಿ.ಮೀ.ಗಳ ಸೈಕಲ್ ರ್ಯಾಲಿಯನ್ನೂ ಆಯೋಜಿಸಲಾಗಿದೆ’ ಎಂದೂ ಅವರು ಹೇಳಿದರು</p><p class="bodytext" style="margin-bottom:0cm;"></p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>