ಅಸಾದುದ್ದೀನ್ ಒವೈಸಿ ಬಿಜೆಪಿಯ ‘ಚಾಚಾ ಜಾನ್’: ರಾಕೇಶ್ ಟಿಕಾಯತ್ ಟೀಕೆ

ಬಾಗ್ಪತ್ (ಉತ್ತರ ಪ್ರದೇಶ): ಆಲ್ ಇಂಡಿಯಾ ಮಜಿಲಿಸ್-ಇ-ಇತ್ಹೇದುಲ್ ಮುಸ್ಲೀಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಒವೈಸಿ ಬಿಜೆಪಿಯ ‘ಚಾಚಾ ಜಾನ್’ ಎಂದು ಭಾರತೀಯ ರೈತ ಒಕ್ಕೂಟದ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಟೀಕಿಸಿದ್ದಾರೆ.
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಸಾರ್ವಜನಿಕ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ ಸ್ಪರ್ಧಿಸುವ ಕುರಿತು ಒವೈಸಿ ನಿರ್ಧಾರ ಕೈಗೊಂಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಓದಿ: ಬಿಜೆಪಿ ರಚಿಸುವ ಕಾನೂನುಗಳಿಗೆ ಕಾಂಗ್ರೆಸ್ ಸಾಥ್: ಒವೈಸಿ ಆರೋಪ
ಬಿಜೆಪಿಯ ‘ಚಾಚಾ ಜಾನ್’ ಒವೈಸಿ ಉತ್ತರ ಪ್ರದೇಶ ಪ್ರವೇಶಿಸಿದ್ದಾರೆ. ಅವರು ಬಿಜೆಪಿಯವರನ್ನು ನಿಂದಿಸಿದರೆ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುವುದಿಲ್ಲ. ಅವರು ಒಂದು ತಂಡವಾಗಿದ್ದಾರೆ ಎಂದು ಟಿಕಾಯತ್ ಆರೋಪಿಸಿರುವುದಾಗಿ ‘ಎಎನ್ಐ’ ಟ್ವೀಟ್ ಮಾಡಿದೆ.
"...BJP's Chacha Jaan, Asaduddin Owaisi has entered Uttar Pradesh. If he (Owaisi) will abuse them (BJP), they will not file any case against him. They are a team..": BKU leader Rakesh Tikait in Baghpat (14.09) pic.twitter.com/qaisUNKr8R
— ANI (@ANI) September 15, 2021
‘ಒವೈಸಿಗೆ ಬಿಜೆಪಿಯ ಆಶೀರ್ವಾದವಿದೆ. ಇದೇ ಕಾರಣಕ್ಕೆ ಅವರು ಧೈರ್ಯವಾಗಿ ಬಿಜೆಪಿಯನ್ನು ನಿಂದಿಸುತ್ತಾರೆ. ಸರ್ಕಾರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಬಿಜೆಪಿಯೂ ಒವೈಸಿಯ ಸಹಾಯ ಪಡೆಯಲಿದೆ. ಈ ನಡೆಯನ್ನು ರೈತರು ಅರ್ಥ ಮಾಡಿಕೊಳ್ಳಬೇಕು. ಒವೈಸಿ ರೈತರನ್ನು ನಾಶ ಮಾಡಲಿದ್ದಾರೆ’ ಎಂದು ಟಿಕಾಯತ್ ಹೇಳಿದ್ದಾರೆ.
ಓದಿ: ದೆಹಲಿಯಲ್ಲಿ ಭಾರಿ ಮಳೆ: ನೀರಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದ ರಾಕೇಶ್ ಟಿಕಾಯತ್
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಇದೀಗ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಉತ್ತರ ಪ್ರದೇಶದತ್ತ ಹೆಚ್ಚು ಗಮನಹರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.