ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ನಾಯಕರ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಪೇಜ್: ದೂರು ದಾಖಲು

ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್
Last Updated 5 ಫೆಬ್ರುವರಿ 2021, 7:44 IST
ಅಕ್ಷರ ಗಾತ್ರ

ಗಾಜಿಯಾಬಾದ್‌ (ಉತ್ತರ ಪ್ರದೇಶ): ರೈತ ನಾಯಕ ರಾಕೇಶ್ ಟಿಕಾಯತ್ ಅವರ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್‌ ಪುಟವನ್ನು ತೆರೆದು, ಅಶ್ಲೀಲ ಫೋಟೊಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಪದಾಧಿಕಾರಿಗಳು ಗುರುವಾರ ಕೌಶಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪರಿಚಯಸ್ಥರೊಬ್ಬರು ರಾಕೇಶ್‌ ಟಿಕಾಯತ್ ಅವರ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಸೃಷ್ಟಿಸಿರುವ ಕುರಿತು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ದೂರಿನ ಪ್ರತಿಯ ಜತೆಗೆ ನಕಲಿ ಫೇಸ್‌ಬುಕ್‌ ಪುಟದ ಸ್ಕ್ರೀನ್ ಶಾಟ್‌ಗಳನ್ನು ಲಗತ್ತಿಸಿರುವುದಾಗಿ ಬಿಕೆಯು ಮಾಧ್ಯಮ ವಿಭಾಗದ ಉಸ್ತುವಾರಿ ಶಂಶರ್ ರಾಣಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ದೂರು ಸ್ವೀಕರಿಸಿರುವ ಠಾಣಾಧಿಕಾರಿ ಜ್ಞಾನೇಂದ್ರ ಸಿಂಗ್, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT