<p class="title"><strong>ನವದೆಹಲಿ (ಪಿಟಿಐ)</strong>: ಆಮ್ಲಜನಕದ ಕಾನ್ಸನ್ಟ್ರೇಟರ್ಗಳನ್ನು ಬ್ಲ್ಯಾಕ್ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟುಕೊಂಡ ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಉದ್ಯಮಿ ನವನೀತ್ ಕಾಲ್ರಾ ಅವರನ್ನು ಐದು ದಿನಗಳವರೆಗೆ ತಮ್ಮ ಕಸ್ಟಡಿಗೆ ನೀಡಬೇಕು ಎಂದು ದೆಹಲಿ ಪೊಲೀಸರು ನ್ಯಾಯಾಲಯವನ್ನು ಕೋರಿದ್ದಾರೆ.</p>.<p class="title">ಭಾನುವಾರ ರಾತ್ರಿ ಕಾಲ್ರಾ ಅವರನ್ನು ಬಂಧಿಸಿದ ಪೊಲೀಸರು, ಸೋಮವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಚನಾ ಬೆನಿವಾಲ್ ಅವರ ಎದುರು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದಾರೆ.</p>.<p class="title">ದೆಹಲಿ ಪೊಲೀಸರು ದಾಳಿ ನಡೆಸಿ ಕಾಲ್ರಾ ಒಡೆತನದ ಮೂರು ರೆಸ್ಟೋರೆಂಟ್ಗಳಿಂದ 524 ಆಮ್ಲಜನಕ ಕಾನ್ಸನ್ಟ್ರೇಟರ್ಗಳನ್ನು ವಶಪಡಿಸಿಕೊಂಡ ನಂತರ ಅವರು ಒಂದು ವಾರದಿಂದ ಪರಾರಿಯಾಗಿದ್ದರು. ಮೇ 5 ರಂದು ಕಾಲ್ರಾ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.</p>.<p class="title">ಕಾಲ್ರಾ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ಮೇ 13 ರಂದು ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ)</strong>: ಆಮ್ಲಜನಕದ ಕಾನ್ಸನ್ಟ್ರೇಟರ್ಗಳನ್ನು ಬ್ಲ್ಯಾಕ್ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟುಕೊಂಡ ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಉದ್ಯಮಿ ನವನೀತ್ ಕಾಲ್ರಾ ಅವರನ್ನು ಐದು ದಿನಗಳವರೆಗೆ ತಮ್ಮ ಕಸ್ಟಡಿಗೆ ನೀಡಬೇಕು ಎಂದು ದೆಹಲಿ ಪೊಲೀಸರು ನ್ಯಾಯಾಲಯವನ್ನು ಕೋರಿದ್ದಾರೆ.</p>.<p class="title">ಭಾನುವಾರ ರಾತ್ರಿ ಕಾಲ್ರಾ ಅವರನ್ನು ಬಂಧಿಸಿದ ಪೊಲೀಸರು, ಸೋಮವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಚನಾ ಬೆನಿವಾಲ್ ಅವರ ಎದುರು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದಾರೆ.</p>.<p class="title">ದೆಹಲಿ ಪೊಲೀಸರು ದಾಳಿ ನಡೆಸಿ ಕಾಲ್ರಾ ಒಡೆತನದ ಮೂರು ರೆಸ್ಟೋರೆಂಟ್ಗಳಿಂದ 524 ಆಮ್ಲಜನಕ ಕಾನ್ಸನ್ಟ್ರೇಟರ್ಗಳನ್ನು ವಶಪಡಿಸಿಕೊಂಡ ನಂತರ ಅವರು ಒಂದು ವಾರದಿಂದ ಪರಾರಿಯಾಗಿದ್ದರು. ಮೇ 5 ರಂದು ಕಾಲ್ರಾ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.</p>.<p class="title">ಕಾಲ್ರಾ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ಮೇ 13 ರಂದು ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>