‘ಉತ್ತರ ಪ್ರದೇಶದ ಅನೇಕ ಜಿಲ್ಲೆಗಳು ಗಂಗಾ ನದಿತಟದಲ್ಲಿವೆ. ಶವಗಳನ್ನು ನದಿಗೆ ಎಸೆಯಲು ಕಾರಣಗಳೇನಿರಬಹುದು ಎಂಬುದು ತಿಳಿದಿಲ್ಲ. ಮೃತದೇಹಗಳು ಕೋವಿಡ್ನಿಂದ ಸಾವಿಗೀಡಾದವರದ್ದೇ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಮೃತದೇಹಗಳು ಕೊಳೆಯಲು ಆರಂಭವಾಗಿದ್ದವು. ಆದರೆ, ಇವುಗಳನ್ನು ಯೋಗ್ಯ ರೀತಿಯಲ್ಲಿ ವಿಲೇವಾರಿ ಮಾಡಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದರ ಜತೆಗೆ ನಾವು ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುತ್ತೇವೆ’ ಎಂದು ಅವರು ಹೇಳಿದ್ದಾರೆ.